ಬ್ರೇಕಿಂಗ್ ನ್ಯೂಸ್
03-01-26 06:51 pm Mangalore Correspondent ಕರಾವಳಿ
ಮಂಗಳೂರು, ಜ.3: ನಗರದ ಕಾವೂರು ಬಳಿಯ ಮರಕಡದಲ್ಲಿ ಟೈರ್ ಬ್ಲಾಸ್ಟ್ ಆಗಿ ಕಾರೊಂದು ರಸ್ತೆಯಿಂದ ಹೊರಕ್ಕೆ ಎಸೆಯಲ್ಪಟ್ಟು ಮನೆ ಕಟ್ಟಡಕ್ಕೆ ಬಡಿದು ಪಲ್ಟಿಯಾದ ಘಟನೆ ನಡೆದಿದ್ದು ಕಾರನ್ನು ಚಲಾಯಿಸುತ್ತಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು. ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ ಹಿಂತಿರುಗುತ್ತಿದ್ದರು. ಇವರ ಕಾರು ಮರಕಡದ ಮೂಲಕ ಬೋಂದೆಲ್ ನತ್ತ ಬರುತ್ತಿದ್ದಾಗ ಒಂದು ಟೈರ್ ಬ್ಲಾಸ್ಟ್ ಆಗಿದ್ದು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಕ್ಕೆ ಹೋಗಿದ್ದು ರಸ್ತೆ ಪಕ್ಕದ ಗುಂಡಿಯಲ್ಲಿರುವ ಕಟ್ಟಡಕ್ಕೆ ಬಡಿದು ಪಲ್ಟಿಯಾಗಿ ಬಿದ್ದಿದೆ.


ಕಾರು ಹಾರಿ ಬಂದು ಪಲ್ಟಿಯಾಗಿ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಿಮೀಯ ರೀತಿಯ ಅಪಘಾತ ನಡೆದಿದ್ದರೂ, ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಗಂಭೀರ ಅಪಘಾತಗಳಿಲ್ಲದೆ ಪಾರಾಗಿದ್ದಾರೆ. ಕಾರು ರಸ್ತೆ ಬದಿಗೆ ವೇಗವಾಗಿ ಹರಿದು ಹಾರಿ ಬಿದ್ದುದನ್ನು ಸ್ಥಳೀಯರು ಗಮನಿಸಿದ್ದು ಕೂಡಲೇ ಕಾರನ್ನು ಎತ್ತಿ ಅದರ ಎಡೆಯಲ್ಲಿ ಸಿಲುಕಿದ್ದ ಪಾದ್ರಿಯನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು ಚಾಲಕ ಬದುಕುಳಿದಿದ್ದೇ ಪವಾಡ ಎಂದು ಜನರಾಡುತ್ತಿದ್ದಾರೆ.
A car lost control near #Marakada in #Mangalore and flipped after crashing into a roadside building. The driver — #FrAndrewLeoDSouza of #Bondel St. #LawrenceChurch — miraculously escaped without serious injuries. CCTV footage of the incident has gone #viral. #caraccident pic.twitter.com/FrXotrYemw
— Headline Karnataka (@hknewsonline) January 3, 2026
A dramatic accident occurred near Marakada in Kavoor, Mangaluru, when a tyre burst caused a speeding car to lose control, jump off the road, hit a building, and overturn. The vehicle was driven by Fr. Andrew Leo D’Souza of St. Lawrence Church, Bondel, who miraculously escaped without major injuries.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am