ಬ್ರೇಕಿಂಗ್ ನ್ಯೂಸ್
03-01-26 08:12 pm Mangalore Correspondent ಕರಾವಳಿ
ಮಂಗಳೂರು, ಜ.3: ತುಳುನಾಡಿನಲ್ಲಿ ದೈವ- ದೇವಸಸ್ಥಾನದ ಜಾತ್ರೋತ್ಸವ ಸಂದರ್ಭ ನಡೆಯುತ್ತಿರುವ ಕೋಳಿ ಅಂಕ ವಿಚಾರದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಚಿಲ್ಲರೆ ರಾಜಕೀಯ ಮಾಡಲು ಹೊರಟಿದ್ದಾರೆ. ಈ ನೆಲದ ಬಗ್ಗೆ ನಿಜವಾಗಿಯೂ ಬಿಜೆಪಿ ನಾಯಕರಿಗೆ ಆಸಕ್ತಿ, ಕಾಳಜಿ ಇದ್ದಿದ್ದರೆ ಅಧಿವೇಶನ ಸಂದರ್ಭ ಯಾಕೆ ಚರ್ಚೆ ಮಾಡದೆ ಮೌನವಾಗಿದ್ದರು? ಅಧಿವೇಶನದಲ್ಲಿ ಸಮಗ್ರ ಚರ್ಚೆ ನಡೆಸಬಹುದಿತ್ತಲ್ವೇ? ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.
ತುಳುನಾಡಿನ ದೈವರಾಧನೆ, ಈ ನೆಲದ ಸಂಸ್ಕೃತಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ, ಮಾತ್ರವಲ್ಲದೆ ಸದಾ ಬೆಂಬಲ ನೀಡುತ್ತಿದೆ. ಈ ನೆಲದ ಜಾನಪದ ಕ್ರೀಡೆ ಕಂಬಳಕ್ಕೆ ಅನುದಾನ, ದೈವ-ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಸೇರಿದಂತೆ ಕರಾವಳಿ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಿದೆ. ಜಾತ್ರೋತ್ಸವ ಸಂದರ್ಭ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಆದರೆ ಪೊಲೀಸ್ ಅಧಿಕಾರಿಗಳು ಕಾನೂನು ಕಾರಣದಿಂದ ಕೋಳಿ ಅಂಕಕ್ಕೆ ಅವಕಾಶ ನೀಡುತ್ತಿಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಶೋಭೆಯಲ್ಲ. ಬಿಜೆಪಿಯವರ ಮೌನವೇ ಕೋಳಿ ಅಂಕ ವಿಚಾರ ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ ಎಂದಿದ್ದಾರೆ.
ಕೆಂಪು ಕಲ್ಲು ಗಣಿಗಾರಿಕೆ ಕ್ರಮಬದ್ಧ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಕೆಂಪು ಕಲ್ಲು ಗಣಿಗಾರಿಕೆ ಅಕ್ರಮವಾಗಿ ನಡೆಯುತ್ತಿದ್ದು, ಲಂಗು ಲಗಾಮಿಲ್ಲದೆ ವ್ಯವಹಾರ ನಡೆಯುತ್ತಿತ್ತು. ರಾಜ್ಯ ಸರಕಾರಕ್ಕೂ ಸಮರ್ಪಕವಾಗಿ ರಾಜಸ್ವ ಸಂದಾಯವಾಗದೆ ಅಕ್ರಮ ಚಟುವಟಿಕೆಗಳಿಗೆ ನೆರವಾಗುತ್ತಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಕ್ರಮಗಳಿಗೆ ಮೂಗುದಾರ ಹಾಕಿ ಕೆಂಪು ಕಲ್ಲು ಗಣಿಗಾರಿಕೆಯನ್ನು ಕ್ರಮಬದ್ಧಗೊಳಿಸಿ ಜನರಿಗೆ ಕೆಂಪು ಕಲ್ಲು ಸುಲಭವಾಗಿ, ಕಾನೂನು ರೀತಿಯಲ್ಲಿ ಸಿಗುವಂತಾಗಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮರಳುಗಾರಿಕೆ ಪರವಾನಗಿ ವಿಚಾರದಲ್ಲೂ ನಾನ್ ಸಿಆರ್ಝೆಡ್ ಪರವಾನಗಿ ಸಮಸ್ಯೆ ಈಗಾಗಲೇ ಬಗೆಹರಿದಿದ್ದು, ಬೇಕಾದಷ್ಟು ಮರಳು ಸಿಗುತ್ತಿದೆ. ನಾನ್ ಸಿಆರ್ಝೆಡ್ ಮರಳುಗಾರಿಕೆ ಕೇಂದ್ರ ಸರಕಾರದ ಸುಪರ್ದಿಯಲ್ಲಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಬಿಜೆಪಿ ಸಂಸದರು, ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಲಿ. ಸಿಆರ್ಝೆಡ್ ಮರಳು ಸಮಸ್ಯೆ ಬಗೆಹರಿದರೆ ಬಡವರಿಗೆ ನಿಜವಾಗಿಯೂ ಅನುಕೂಲವಾಗಲಿದೆ. ಬಿಜೆಪಿಯವರು ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ಬಗೆಹರಿಸಿ ಜನರಿಗೆ ಸಿಆರ್ಝೆಡ್ ವ್ಯಾಪ್ತಿಯಲ್ಲಿ ಸುಲಭದಲ್ಲಿ ಮರಳು ಸಿಗುವಂತೆ ಮಾಡಲಿ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.
Dakshina Kannada District Congress President Harish Kumar criticized BJP MLAs for allegedly politicising the traditional Koli Anka issue during temple festivals in Tulu Nadu. He questioned why BJP leaders, who claim concern for local culture, failed to raise the matter during the Assembly session where a detailed discussion could have been held.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm