ಬ್ರೇಕಿಂಗ್ ನ್ಯೂಸ್
03-01-26 08:12 pm Mangalore Correspondent ಕರಾವಳಿ
ಮಂಗಳೂರು, ಜ.3: ತುಳುನಾಡಿನಲ್ಲಿ ದೈವ- ದೇವಸಸ್ಥಾನದ ಜಾತ್ರೋತ್ಸವ ಸಂದರ್ಭ ನಡೆಯುತ್ತಿರುವ ಕೋಳಿ ಅಂಕ ವಿಚಾರದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಚಿಲ್ಲರೆ ರಾಜಕೀಯ ಮಾಡಲು ಹೊರಟಿದ್ದಾರೆ. ಈ ನೆಲದ ಬಗ್ಗೆ ನಿಜವಾಗಿಯೂ ಬಿಜೆಪಿ ನಾಯಕರಿಗೆ ಆಸಕ್ತಿ, ಕಾಳಜಿ ಇದ್ದಿದ್ದರೆ ಅಧಿವೇಶನ ಸಂದರ್ಭ ಯಾಕೆ ಚರ್ಚೆ ಮಾಡದೆ ಮೌನವಾಗಿದ್ದರು? ಅಧಿವೇಶನದಲ್ಲಿ ಸಮಗ್ರ ಚರ್ಚೆ ನಡೆಸಬಹುದಿತ್ತಲ್ವೇ? ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.
ತುಳುನಾಡಿನ ದೈವರಾಧನೆ, ಈ ನೆಲದ ಸಂಸ್ಕೃತಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ, ಮಾತ್ರವಲ್ಲದೆ ಸದಾ ಬೆಂಬಲ ನೀಡುತ್ತಿದೆ. ಈ ನೆಲದ ಜಾನಪದ ಕ್ರೀಡೆ ಕಂಬಳಕ್ಕೆ ಅನುದಾನ, ದೈವ-ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಸೇರಿದಂತೆ ಕರಾವಳಿ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಿದೆ. ಜಾತ್ರೋತ್ಸವ ಸಂದರ್ಭ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವರಿಕೆ ಮಾಡಲಾಗಿದೆ. ಆದರೆ ಪೊಲೀಸ್ ಅಧಿಕಾರಿಗಳು ಕಾನೂನು ಕಾರಣದಿಂದ ಕೋಳಿ ಅಂಕಕ್ಕೆ ಅವಕಾಶ ನೀಡುತ್ತಿಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಶೋಭೆಯಲ್ಲ. ಬಿಜೆಪಿಯವರ ಮೌನವೇ ಕೋಳಿ ಅಂಕ ವಿಚಾರ ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ ಎಂದಿದ್ದಾರೆ.
ಕೆಂಪು ಕಲ್ಲು ಗಣಿಗಾರಿಕೆ ಕ್ರಮಬದ್ಧ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಕೆಂಪು ಕಲ್ಲು ಗಣಿಗಾರಿಕೆ ಅಕ್ರಮವಾಗಿ ನಡೆಯುತ್ತಿದ್ದು, ಲಂಗು ಲಗಾಮಿಲ್ಲದೆ ವ್ಯವಹಾರ ನಡೆಯುತ್ತಿತ್ತು. ರಾಜ್ಯ ಸರಕಾರಕ್ಕೂ ಸಮರ್ಪಕವಾಗಿ ರಾಜಸ್ವ ಸಂದಾಯವಾಗದೆ ಅಕ್ರಮ ಚಟುವಟಿಕೆಗಳಿಗೆ ನೆರವಾಗುತ್ತಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಕ್ರಮಗಳಿಗೆ ಮೂಗುದಾರ ಹಾಕಿ ಕೆಂಪು ಕಲ್ಲು ಗಣಿಗಾರಿಕೆಯನ್ನು ಕ್ರಮಬದ್ಧಗೊಳಿಸಿ ಜನರಿಗೆ ಕೆಂಪು ಕಲ್ಲು ಸುಲಭವಾಗಿ, ಕಾನೂನು ರೀತಿಯಲ್ಲಿ ಸಿಗುವಂತಾಗಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮರಳುಗಾರಿಕೆ ಪರವಾನಗಿ ವಿಚಾರದಲ್ಲೂ ನಾನ್ ಸಿಆರ್ಝೆಡ್ ಪರವಾನಗಿ ಸಮಸ್ಯೆ ಈಗಾಗಲೇ ಬಗೆಹರಿದಿದ್ದು, ಬೇಕಾದಷ್ಟು ಮರಳು ಸಿಗುತ್ತಿದೆ. ನಾನ್ ಸಿಆರ್ಝೆಡ್ ಮರಳುಗಾರಿಕೆ ಕೇಂದ್ರ ಸರಕಾರದ ಸುಪರ್ದಿಯಲ್ಲಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಬಿಜೆಪಿ ಸಂಸದರು, ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಲಿ. ಸಿಆರ್ಝೆಡ್ ಮರಳು ಸಮಸ್ಯೆ ಬಗೆಹರಿದರೆ ಬಡವರಿಗೆ ನಿಜವಾಗಿಯೂ ಅನುಕೂಲವಾಗಲಿದೆ. ಬಿಜೆಪಿಯವರು ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ಬಗೆಹರಿಸಿ ಜನರಿಗೆ ಸಿಆರ್ಝೆಡ್ ವ್ಯಾಪ್ತಿಯಲ್ಲಿ ಸುಲಭದಲ್ಲಿ ಮರಳು ಸಿಗುವಂತೆ ಮಾಡಲಿ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.
Dakshina Kannada District Congress President Harish Kumar criticized BJP MLAs for allegedly politicising the traditional Koli Anka issue during temple festivals in Tulu Nadu. He questioned why BJP leaders, who claim concern for local culture, failed to raise the matter during the Assembly session where a detailed discussion could have been held.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am