ಬ್ರೇಕಿಂಗ್ ನ್ಯೂಸ್
03-01-26 09:13 pm Mangalore Correspondent ಕರಾವಳಿ
ಮಂಗಳೂರು, ಜ.3 : ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 23 ರಿಂದ 26ರ ವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳು
ಫಲಪುಷ್ಪ ಪ್ರದರ್ಶನದ ಅಂಗವಾಗಿ ಮುಖ್ಯ ಆಕರ್ಷಣೆಯಾಗಿ ಹೂವುಗಳಿಂದ ವಿವಿಧ ಕಲಾಕೃತಿಯನ್ನು ತಯಾರಿಸಿ ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ಕದ್ರಿ ಉದ್ಯಾನವನದಲ್ಲಿ ಸುಮಾರು 15 ಸಾವಿರ ಸಂಖ್ಯೆಯ 30 ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಪೆಟೂನಿಯಾ, ಟೊರಿನೋ, ಇತ್ಯಾದಿ ಹೂವುಗಳನ್ನು ಕುಂಡಗಳಲ್ಲಿ ಬೆಳೆಯಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ. ಹಾಗೂ ತರಕಾರಿ ಕೈತೋಟದ ಪ್ರಾತ್ಯಕ್ಷತೆಯನ್ನು ಏರ್ಪಡಿಸಲಾಗುತ್ತದೆ.
ಹಣ್ಣು ಮತ್ತು ತರಕಾರಿಗಳಿಂದ ಜಿಲ್ಲೆಯ ಪ್ರಾಮುಖ್ಯತೆ ಬಗ್ಗೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಕೆತ್ತನೆ ಮಾಡಿ ಪ್ರದರ್ಶಿಸಲಾಗುತ್ತದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ. ವಿವಿಧ ಜೇನು ಸಹಕಾರ ಸಂಘ, ರೈತ ಉತ್ಪಾದಕರ ಸಂಸ್ಥೆಗಳಿಂದ ಜೇನಿನ ವಿವಿಧ ತಳಿಗಳ, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಜೇನಿನ ಔಷಧೀಯ ಗುಣಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.
ಸಸ್ಯ ಉತ್ಸವ ಏರ್ಪಡಿಸಿ ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತದೆ.
ಫಲಪುಷ್ಪ ಪ್ರದರ್ಶನದಲ್ಲಿ ವಯಸ್ಕರಿಗೆ 30 ರೂ. ಮತ್ತು ಮಕ್ಕಳಿಗೆ ರೂ. 20 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಶಾಲಾ ಶಿಕ್ಷಕರೊಂದಿಗೆ ಸಮವಸ್ತ್ರದಲ್ಲಿ ಆಗಮಿಸುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತದೆ. ರೈತರು ಬೆಳೆದಿರುವಂತಹ ವಿಶಿಷ್ಟ ಬಗೆಯ ಹಣ್ಣು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳು, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದಂತಹ ಪ್ರದರ್ಶಿಕೆಗಳನ್ನು ಜನವರಿ 22 ರಂದು ಬೆಳಗ್ಗೆ 10.30 ಗಂಟೆಗೆ ಕದ್ರಿ ಉದ್ಯಾನವನಕ್ಕೆ ತರಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of Republic Day celebrations, a Fruit and Flower Exhibition will be organised from January 23 to 26 at Kadri Park, Mangaluru. The event is jointly hosted by the Horticulture Department, District Administration, Zilla Panchayat, Dakshina Kannada, Kadri Park Development Committee, and Siri Horticulture Association, Mangaluru.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am