ಬ್ರೇಕಿಂಗ್ ನ್ಯೂಸ್
03-01-26 09:13 pm Mangalore Correspondent ಕರಾವಳಿ
ಮಂಗಳೂರು, ಜ.3 : ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 23 ರಿಂದ 26ರ ವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳು
ಫಲಪುಷ್ಪ ಪ್ರದರ್ಶನದ ಅಂಗವಾಗಿ ಮುಖ್ಯ ಆಕರ್ಷಣೆಯಾಗಿ ಹೂವುಗಳಿಂದ ವಿವಿಧ ಕಲಾಕೃತಿಯನ್ನು ತಯಾರಿಸಿ ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ಕದ್ರಿ ಉದ್ಯಾನವನದಲ್ಲಿ ಸುಮಾರು 15 ಸಾವಿರ ಸಂಖ್ಯೆಯ 30 ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಪೆಟೂನಿಯಾ, ಟೊರಿನೋ, ಇತ್ಯಾದಿ ಹೂವುಗಳನ್ನು ಕುಂಡಗಳಲ್ಲಿ ಬೆಳೆಯಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ. ಹಾಗೂ ತರಕಾರಿ ಕೈತೋಟದ ಪ್ರಾತ್ಯಕ್ಷತೆಯನ್ನು ಏರ್ಪಡಿಸಲಾಗುತ್ತದೆ.
ಹಣ್ಣು ಮತ್ತು ತರಕಾರಿಗಳಿಂದ ಜಿಲ್ಲೆಯ ಪ್ರಾಮುಖ್ಯತೆ ಬಗ್ಗೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಕೆತ್ತನೆ ಮಾಡಿ ಪ್ರದರ್ಶಿಸಲಾಗುತ್ತದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ. ವಿವಿಧ ಜೇನು ಸಹಕಾರ ಸಂಘ, ರೈತ ಉತ್ಪಾದಕರ ಸಂಸ್ಥೆಗಳಿಂದ ಜೇನಿನ ವಿವಿಧ ತಳಿಗಳ, ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಜೇನಿನ ಔಷಧೀಯ ಗುಣಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.
ಸಸ್ಯ ಉತ್ಸವ ಏರ್ಪಡಿಸಿ ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತದೆ.
ಫಲಪುಷ್ಪ ಪ್ರದರ್ಶನದಲ್ಲಿ ವಯಸ್ಕರಿಗೆ 30 ರೂ. ಮತ್ತು ಮಕ್ಕಳಿಗೆ ರೂ. 20 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಶಾಲಾ ಶಿಕ್ಷಕರೊಂದಿಗೆ ಸಮವಸ್ತ್ರದಲ್ಲಿ ಆಗಮಿಸುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತದೆ. ರೈತರು ಬೆಳೆದಿರುವಂತಹ ವಿಶಿಷ್ಟ ಬಗೆಯ ಹಣ್ಣು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳು, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದಂತಹ ಪ್ರದರ್ಶಿಕೆಗಳನ್ನು ಜನವರಿ 22 ರಂದು ಬೆಳಗ್ಗೆ 10.30 ಗಂಟೆಗೆ ಕದ್ರಿ ಉದ್ಯಾನವನಕ್ಕೆ ತರಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of Republic Day celebrations, a Fruit and Flower Exhibition will be organised from January 23 to 26 at Kadri Park, Mangaluru. The event is jointly hosted by the Horticulture Department, District Administration, Zilla Panchayat, Dakshina Kannada, Kadri Park Development Committee, and Siri Horticulture Association, Mangaluru.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm