ಬ್ರೇಕಿಂಗ್ ನ್ಯೂಸ್
11-01-26 10:39 pm Mangaluru Staffer ಕರಾವಳಿ
ಮಂಗಳೂರು, ಜ.11: ಭಯೋತ್ಪಾದನೆ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತ ಅದೆಷ್ಟೇ ಪ್ರಯತ್ನಪಟ್ಟರೂ, ಅದು ಮುಂದುವರೆಯುತ್ತಲೇ ಇರುತ್ತದೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೇರಿಕಾ ಮತ್ತು ಚೀನಾದ ಬೆಂಬಲ ಇದೆ. ನಾವು ಇನ್ನಷ್ಟು ರಕ್ತಪಾತಕ್ಕೆ ತಯಾರಾಗಬೇಕು ಎಂದು ಪ್ರೊಫೆಸರ್ ಡಾ.ಶ್ರೀರಾಮ್ ಸುಂದರ್ ಚೌಲಿಯಾ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು ಲಿಟ್ ಫೆಸ್ಟ್ ಎಂಟನೇ ಆವೃತ್ತಿಯಲ್ಲಿ ದೇಶದ ಜಾಗತಿಕ ಸಂಬಂಧಗಳ ಕುರಿತಾಗಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರವನ್ನು ಭಾರತೀಯ ಸೇನೆ ಇನ್ನಷ್ಟು ಮುಂದುವರೆಸಬೇಕಿತ್ತು, ಅರ್ಧಕ್ಕೆ ನಿಲ್ಲಿಸಬಾರದಾಗಿತ್ತು ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದರು. ನಮ್ಮ ಉದ್ದೇಶ ಯುದ್ಧ ಮಾಡುವುದಾಗಿರಲಿಲ್ಲ. ಭಯೋತ್ಪಾದನೆಗೆ ಉತ್ತರ ಕೊಡಬೇಕಿತ್ತು. ನಮ್ಮನ್ನು ಪ್ರಚೋದಿಸಿದರೆ ನಾವು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶ ರವಾನಿಸಬೇಕಿತ್ತು. ಆ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದೇವೆ. ಆದರೂ ಭಯೋತ್ಪಾದಕ ಚಟುವಟಿಕೆಗಳು ಮತ್ತೆ ಮರುಕಳಿಸುತ್ತವೆ. ನಾವೆಷ್ಟೇ ತಡೆಯುವುದಕ್ಕೆ ಪ್ರಯತ್ನ ಮಾಡಿದರೂ ಮುಂದಿನ ದಿನಗಳಲ್ಲಿ ಇನ್ನಷ್ಟು ರಕ್ತಪಾತಗಳು, ದುರಂತಗಳು ನಡೆಯುತ್ತವೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೇರಿಕಾ ಮತ್ತು ಚೀನಾದ ಬೆಂಬಲವಿದೆ. ಅಂತಹ ರಕ್ತಪಾತಗಳಿಗೆ ನಾವು ಮುಂದಿನ ದಿನಗಳಲ್ಲಿ ಇನ್ನಷ್ಟು ತಯಾರಾಗಬೇಕಿದೆ’ ಎಂದರು.

‘ಬಲಿಷ್ಠ ದೇಶಗಳು ಒಂದು ವ್ಯವಸ್ಥೆಯನ್ನು ಹಾಳು ಮಾಡುತ್ತಿವೆ ಎಂದ ಅವರು, ಕೆಲವು ವರ್ಷಗಳಿಂದೀಚೆಗೆ ವ್ಯವಸ್ಥೆ ಕುಸಿಯುತ್ತಿರುವುದನ್ನು ನೋಡಬಹುದು. ರಷ್ಯಾ-ಉಕ್ರೇನ್ ಯುದ್ಧ ಮೂರು ವರ್ಷಗಳಿಂದ ನಡೆಯುತ್ತಿದೆ. ಅದರಿಂದ ಸಾಕಷ್ಟು ಪ್ರಾಣ ಹಾನಿಯಾಗಿದೆ. ಆದರೂ ಯುದ್ಧ ನಿಂತಿಲ್ಲ. ನಂತರ ಇಸ್ರೇಲ್ ಮತ್ತು ಇರಾನ್ ನಡುವೆ ಕದನವಾಯಿತು. ಈಗ ಅಮೇರಿಕಾ, ವೆನೆಜುವೆಲಾ ಮೇಲೆ ಬೇರೆ ರೀತಿಯಲ್ಲಿ ದಾಳಿ ಮಾಡಿದೆ. ಬಲಿಷ್ಠರು ಏನು ಮಾಡಿದರೂ ಸರಿ ಎನ್ನುವಂತಾಗಿದೆ. ಕಾಡಿನ ನೀತಿ ಜಾರಿಯಾಗುತ್ತಿದೆ. ದುರ್ಬಲರಿಗೆ ಯಾವುದೇ ಸುರಕ್ಷತೆ ಇಲ್ಲ ಎನ್ನುವಂತಾಗಿದೆ. ದೊಡ್ಡ ಮೀನುಗಳು ಸಣ್ಣ ಮೀನುಗಳನ್ನು ತಿನ್ನುತ್ತಿವೆ. ಸಾಮ್ರಾಜ್ಯಶಾಹಿ ವರ್ತನೆ ಹೆಚ್ಚಾಗುತ್ತಿದೆ. ನಾವು ಇದೆಲ್ಲದರಿಂದ ದೂರ ಉಳಿದು ಅಭಿವೃದ್ಧಿಯತ್ತ ಗಮನಹರಿಸಬೇಕು. ಯುದ್ಧವನ್ನು ತಪ್ಪಿಸಿ, ನಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಒತ್ತಡಗಳ ನಡುವೆಯೂ ಭಾರತ ಅಸ್ತಿತ್ವ ಉಳಿಸಿಕೊಂಡಿದೆ
ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಟಿ.ಎಸ್. ತಿರುಮೂರ್ತಿ ಮಾತನಾಡಿ, ‘ನಾವು ಇಂದು ಹಲವು ಸಮಸ್ಯೆಗಳ ನಡುವೆಯೂ ನಾಲ್ಕನೇ ದೊಡ್ಡ ಆರ್ಥಿಕತೆಯಾಗಿ ಬೆಳೆದಿದ್ದೇವೆ. ಅಮೇರಿಕಾದ ಹಲವು ಒತ್ತಡಗಳ ನಡುವೆಯೂ ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದ್ದೇವೆ. ಬಹಳಷ್ಟು ದೇಶಗಳು ಒತ್ತಡ ತಾಳಲಾರದೆ ಮಣಿದಿವೆ. ತಮಗೆ ಸಿಗುತ್ತಿರುವ ಹಲವು ಸವಲತ್ತುಗಳು ತಪ್ಪಬಹುದು ಎಂಬ ಭಯದಿಂದ ತಲೆಬಾಗಿವೆ. ಆದರೆ, ಭಾರತ ಮಾತ್ರ ಯಾವುದೇ ಒತ್ತಡಕ್ಕೆ ಬಗ್ಗಿಲ್ಲ. ಅಮೇರಿಕಾ ಬೇರೆ ರಾಷ್ಟ್ರಗಳಿಗೆ ಬೆದರಿಕೆ ಹಾಕಿ ತಮ್ಮ ದೃಷ್ಟಿಕೋನವನ್ನು ಒಪ್ಪಿಕೊಳ್ಳುವಂತೆ ಮಾಡುತ್ತಿದೆ. ಆದರೆ, ಭಾರತ ಮಾತ್ರ ಚಾತುರ್ಯದಿಂದ ಅದನ್ನೆಲ್ಲಾ ತಪ್ಪಿಸಿಕೊಂಡು, ಬೆಳವಣಿಗೆಯತ್ತ ಗಮನಹರಿಸುತ್ತಿದೆ’ ಎಂದರು. ವಿಜೇತ್ ಕನಹಳ್ಳಿ ಸಂವಾದ ನಿರ್ವಹಿಸಿದರು.
Noted academic and professor Dr Sriram Sundar Choulia has said that India must be prepared for more bloodshed in the future, as terrorism is unlikely to end due to continued support to Pakistan from the United States and China.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm