ಬ್ರೇಕಿಂಗ್ ನ್ಯೂಸ್
16-01-26 07:33 pm Mangalore Correspondent ಕರಾವಳಿ
ಮಂಗಳೂರು, ಜ.16 : ಕರಾವಳಿಯ ಸಾರಿಗೆ ಸಂಪರ್ಕ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡಲು ಕರ್ನಾಟಕ ಕರಾವಳಿ ಜಲಸಾರಿಗೆ ಮಂಡಳಿ (ಮರಿಟೈಮ್ ಬೋರ್ಡ್) ಎರಡು ಬೃಹತ್ ಯೋಜನೆಗಳನ್ನು ಘೋಷಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಂಚಾರ ದಟ್ಟಣೆಗೆ ಪರ್ಯಾಯವಾಗಿ ಮಂಗಳೂರಿನಿಂದ ಕುಂದಾಪುರದ ಮರವಂತೆಯ ವರೆಗೆ ಸಾಗರ ಮಾರ್ಗದ ‘ಫೆರ್ರಿ’ (ದೋಣಿ) ಸೇವೆ ಮತ್ತು ಮಂಗಳೂರು ನಗರದ ಸುತ್ತಮುತ್ತ ‘ಜಲ ಮೆಟ್ರೋ’ ಜಾರಿಗೆ ಯೋಜನೆ ರೂಪಿಸಿದೆ.
ಮಂಗಳೂರು - ಮರವಂತೆ ಕರಾವಳಿ ಫೆರ್ರಿ ಸೇವೆ
ಮಂಗಳೂರಿನಿಂದ ಕುಂದಾಪುರ ತಾಲೂಕಿನ ಮರವಂತೆಯ ವರೆಗೆ ಸುಮಾರು 110 ಕಿ.ಮೀ. ಉದ್ದದ ಜಲಮಾರ್ಗವನ್ನು ಅಭಿವೃದ್ಧಿಪಡಿಸುತ್ತಿದೆ. ಫೆರ್ರಿ ಸೇವೆಯು ಹಳೆ ಮಂಗಳೂರು ಬಂದರು, ಹೆಜಮಾಡಿ, ಮಲ್ಪೆ, ಕೋಟ ಮತ್ತು ಮರವಂತೆ ಹೀಗೆ ಒಟ್ಟು ಐದು ಕಡೆಗಳಲ್ಲಿ ನಿಲುಗಡೆ ಹೊಂದಿರಲಿದೆ. ಅಂದಾಜು 37.8 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನ ಗೊಳಿಸಲಾಗುವುದು. ಆಯ್ಕೆಯಾದ ಸಂಸ್ಥೆಗೆ 20 ವರ್ಷಗಳ ಕಾಲ ನಿರ್ವಹಣೆಯ ಜವಾಬ್ದಾರಿ ನೀಡಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಿಲುಗಡೆ ಇರುವ ಐದೂ ಸ್ಥಳಗಳಲ್ಲಿ ಅತ್ಯಾಧುನಿಕ ಜೆಟ್ಟಿಗಳನ್ನು (ದೋಣಿ ನಿಲ್ದಾಣ) ನಿರ್ಮಿಸಲು ಉದ್ದೇಶಿಸಲಾಗಿದೆ.
ಮಂಗಳೂರಿಗೆ ಜಲ ಮೆಟ್ರೋ ಯೋಜನೆ
ಇದೇ ವೇಳೆ, ಮಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುಮಾರು 180 ಕೋಟಿ ರೂ. ಹೂಡಿಕೆಯೊಂದಿಗೆ ‘ಜಲ ಮೆಟ್ರೋ’ ಯೋಜನೆಯನ್ನು ರೂಪಿಸಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಮಳವೂರು ಸೇತುವೆಯಿಂದ ಜಪ್ಪಿನಮೊಗರು ಸೇತುವೆಯ ವರೆಗೆ ಈ ಸೇವೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಗುರುಪುರ ಮತ್ತು ನೇತ್ರಾವತಿ ನದಿಗಳ ಮೂಲಕ ಹಳೆ ಮಂಗಳೂರು ಬಂದರನ್ನು ಸಂಪರ್ಕಿಸುವ ಈ ಮಾರ್ಗವು ನಗರದ ವಿವಿಧ ಭಾಗಗಳನ್ನು ಜೋಡಿಸಲಿದೆ.
ಪ್ರವಾಸೋದ್ಯಮಕ್ಕೆ ಬೂಸ್ಟ್ ಸಾಧ್ಯತೆ
ಮರವಂತೆಯಂತಹ ಪ್ರವಾಸಿ ತಾಣಗಳಿಗೆ ಸಮುದ್ರ ಮಾರ್ಗದ ಮೂಲಕ ಪ್ರಯಾಣಿಸುವುದು ಪ್ರವಾಸಿಗರಿಗೆ ಹೊಸ ಅನುಭವ ನೀಡಲಿದೆ. ಪರಿಸರ ಸ್ನೇಹಿ ಮತ್ತು ಕಡಿಮೆ ವೆಚ್ಚದ ಈ ಜಲ ಸಾರಿಗೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆರ್ಥಿಕತೆಗೆ ದೊಡ್ಡ ಬಲ ನೀಡಲಿದೆ ಎಂದು ಮಂಡಳಿಯ ಅಧಿಕಾರಿಗಳು ಆಶಿಸಿದ್ದಾರೆ.
The Karnataka Maritime Board has announced plans to introduce a sea-route ferry service between Mangaluru and Maravanthe, along with a Water Metro project in Mangaluru. Aimed at easing NH-66 traffic and boosting coastal tourism, the projects are expected to improve connectivity and provide an eco-friendly transport alternative.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am