ಬ್ರೇಕಿಂಗ್ ನ್ಯೂಸ್
17-01-26 05:12 pm Mangalore Correspondent ಕರಾವಳಿ
ಮಂಗಳೂರು, ಜ.17 : ಮಂಗಳೂರಿನ ಸೇಂಟ್ ಅಲೋಶಿಯಸ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅದರ ಹಳೆಯ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಿಗಾಗಿ ನವೀನ ಮತ್ತು ಅಂತರ್ಗತ ರಸಪ್ರಶ್ನೆ ಕಾರ್ಯಕ್ರಮ "ಅಲೋಯ್ ಕ್ವಿಜ್ ವಿಜ್ - 2026" ಹಮ್ಮಿಕೊಂಡಿದೆ.
ಜನವರಿ 18ರ ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಕೊಡಿಯಾಲ್ಬೈಲಿನ ಶಾಲಾ ಆವರಣದಲ್ಲಿ ಸ್ಪರ್ಧೆ ನಡೆಯಲಿದ್ದು, ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸ್ಪರ್ಧೆಯು ವಿಶೇಷವಾಗಿದ್ದು, ಪ್ರತಿ ತಂಡವು ಒಬ್ಬ ದೃಷ್ಟಿಹೀನ ಸ್ಪರ್ಧಿ, ಒಬ್ಬ ಶ್ರವಣ ಮತ್ತು ವಾಕ್ ದೋಷವುಳ್ಳ ವಿದ್ಯಾರ್ಥಿ, ಒಬ್ಬ ಸರ್ಕಾರಿ ಶಾಲೆಯ ವಿದ್ಯಾರ್ಥಿ ಮತ್ತು ಇಬ್ಬರು ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಒಳಗೊಂಡಿರುತ್ತದೆ. ವಿಶೇಷ ಚೇತನ ಮಕ್ಕಳ ಸಾಮರ್ಥ್ಯಗಳನ್ನು ಸಮಾಜಕ್ಕೆ ತೋರಿಸುವುದು ಮತ್ತು ಭವಿಷ್ಯದಲ್ಲಿ ಇಂತಹ ಮಕ್ಕಳೊಂದಿಗೆ ಬೆರೆಯುವಲ್ಲಿ ಇರುವ ಹಿಂಜರಿಕೆಯನ್ನು ಹೋಗಲಾಡಿಸಲು ಯುವ ವಿದ್ಯಾರ್ಥಿಗಳನ್ನು ಸಂವೇದನಾಶೀಲರನ್ನಾಗಿ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಜೊಸಿಟ್ಟಾ ಸಿಕ್ವೇರಾ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಯು ಎರಡು ಸೆಮಿಫೈನಲ್ ಮತ್ತು ಆರು ತಂಡಗಳ ಫೈನಲ್ ಹಂತಗಳನ್ನು ಹೊಂದಿದ್ದು, ಇದರಲ್ಲಿ ಬ್ರೈಲ್ ಆಧಾರಿತ ಪ್ರಶ್ನಾವಳಿ, "ಚಾರ್ಡ್ಸ್ - ಆಕ್ಷನ್ ಸ್ಪೀಕ್ ಲೌಡರ್" ಮತ್ತು "ಹಾರ್ಮನಿ ಇನ್ ಥಾಟ್" ನಂತಹ ಐದು ವೈವಿಧ್ಯಮಯ ಸುತ್ತುಗಳು ಇರಲಿವೆ. ನೀಲ್ ರೊಡ್ರಿಗಸ್ ಈ ಕಾರ್ಯಕ್ರಮವನ್ನು ಸಂಯೋಜಿಸುತ್ತಿದ್ದು, ಮಕ್ಕಳು ಅಡೆತಡೆಗಳನ್ನು ಮೆಟ್ಟಿ ನಿಂತು "ಅಲೋಯ್ ಕ್ವಿಜ್-ವಿಜ್ 2026" ಪ್ರಶಸ್ತಿಯನ್ನು ಗೆಲ್ಲಲು ಉತ್ತೇಜಿಸುತ್ತಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ನೀಲ್ ರೋಡ್ರಿಗಸ್, ರೋಹಿತ್ ಕರ್ಕಡ ಇದ್ದರು.
St Aloysius Higher Primary School, Mangaluru, along with its Alumni Association, is organising the innovative and inclusive quiz competition “Aloye Quiz Wiz – 2026” on January 18. The event brings together specially-abled students, government school students, and private school students in mixed teams to promote inclusion, sensitivity, and showcase the abilities of children with special needs.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm