ಬ್ರೇಕಿಂಗ್ ನ್ಯೂಸ್
18-01-26 09:58 pm Mangalore Correspondent ಕರಾವಳಿ
ಪುತ್ತೂರು, ಜ.18 : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ.
ಮೃತ ಯುವಕರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಈ ವೇಳೆ, ಸುಜಿತ್ ಸ್ನಾನಕ್ಕೆಂದು ಕುಲ್ಕುಂದದಲ್ಲಿ ಕುಮಾರಧಾರ ನದಿಗೆ ಇಳಿದಿದ್ದು, ಆತನಿಗೆ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಹರಿಪ್ರಸಾದ್ ರಕ್ಷಣೆಗಾಗಿ ನದಿಗೆ ಇಳಿದಿದ್ದು ಇಬ್ಬರೂ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನೀರಿನಲ್ಲಿ ಮುಳುಗಿದ ಇಬ್ಬರ ಮೃತದೇಹ ತುಸು ದೂರ ನದಿಯ ದಡದಲ್ಲಿದ್ದು ನದಿಯಿಂದ ಮೇಲಕ್ಕೆತ್ತಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ಅನುಗ್ರಹ ಎಂಟರ್ ಪ್ರೈಸಸ್ ಹೆಸರಿನ ಹಾರ್ಡ್ ವೇರ್ ಅಂಗಡಿ ನಡೆಸುತ್ತಿದ್ದರು. ಅದೇ ಅಂಗಡಿಯಲ್ಲಿ ಸುಜಿತ್ ಕೆಲಸಕ್ಕಿದ್ದರು. ವನಭೋಜನ ಸಲುವಾಗಿ ಭಾನುವಾರ ಮಧ್ಯಾಹ್ನ ಇತರ ಹತ್ತು ಮಂದಿ ಸ್ನೇಹಿತರು ಕುಮಾರಧಾರಾ ನದಿಯ ಬಳಿಗೆ ಬಂದಿದ್ದರು. ಸಂಜೆಯ ವೇಳೆಗೆ ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಅನಾಹುತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Two young men from Sullia, Hariprasad (37) and Sujith (26), drowned in the Kumaradhara River near Kukke Subrahmanya while bathing during a picnic. Sujith, who could not swim, slipped into deep water, and Hariprasad drowned while trying to rescue him. Police have registered a case and are investigating the incident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am