ಬ್ರೇಕಿಂಗ್ ನ್ಯೂಸ್
19-01-26 10:55 pm Mangalore Correspondent ಕರಾವಳಿ
ಮಂಗಳೂರು, ಜ.19 : ಐದು ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳ ಕಾದು ನೆರೆಮನೆಯ ದಂಪತಿಯನ್ನು ಅಟ್ಟಾಡಿಸಿ ಕೊಂದು ಹಾಕಿದ್ದ ಮುಲ್ಕಿಯ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ನಿವಾಸಿ ಅಲ್ಫೋನ್ಸ್ ಸಲ್ದಾನ (65) ಶಿಕ್ಷೆಗೀಡಾದ ವ್ಯಕ್ತಿ.
2020ರ ಎಪ್ರಿಲ್ 29ರಂದು ಆರೋಪಿ ಆಲ್ಫೋನ್ಸ್ ಸಲ್ದಾನ ಎಂಬಾತ ತನ್ನ ನೆರೆಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾ ಜೊತೆಗೆ ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಮಾಡಿದ್ದ. ಬಳಿಕ ವಿನ್ಸೆಂಟ್ ಡಿಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದ. ಈ ವೇಳೆ, ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನ ಪತ್ನಿ ಶ್ರೀಮತಿ ಹೆಲೆನ್ ಡಿ.ಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಅವರನ್ನೂ ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆಗೈದಿದ್ದ.

ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು, ಅಂದಿನ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಮುಲ್ಕಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್ ಕೆ ಹಾಗೂ ಹೆಚ್ ಸಿ ವಾದಿರಾಜ ಅವರು ತನಿಖೆಗೆ ಸಹಕರಿಸಿರುತ್ತಾರೆ. ಸದ್ರಿ ಪ್ರಕರಣದ ಬಗ್ಗೆ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ವಿಚಾರಣೆ ನಡೆಸಿದ್ದು ಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಅರೋಪಿಗೆ ಜ.19ರಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿರುತ್ತಾರೆ.
ಅಲ್ಲದೆ, ಆರೋಪಿಗೆ 2 ಲಕ್ಷ ರೂ. ದಂಡ ವಿಧಿಸಿದ್ದಾರೆ. ಸಾಕ್ಷಿ ವಿಚಾರಣೆ ಸಮಯ ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಸಂತ್ರಸ್ತರ ಪರ ವಾದ ಮಂಡಿಸಿರುತ್ತಾರೆ.
In a case stemming from a trivial dispute, the II Additional District and Sessions Court in Mangaluru has sentenced a man to life imprisonment for brutally murdering his neighbouring couple five years ago.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am