ಬ್ರೇಕಿಂಗ್ ನ್ಯೂಸ್
20-01-26 08:07 pm Mangalore Correspondent ಕರಾವಳಿ
ಮಂಗಳೂರು, ಜ.20 : ಉಳ್ಳಾಲದ ಸೈಯದ್ ಮದನಿ ದರ್ಗಾ ಆಡಳಿತದ ಅವ್ಯವಹಾರ ಮತ್ತು ದುರಾಡಳಿತದ ಕುರಿತ ಆರೋಪದ ಬಗ್ಗೆ ಹೈಕೋರ್ಟ್ ಆದೇಶದಂತೆ, ಕರ್ನಾಟಕ ವಕ್ಫ್ ಬೋರ್ಡ್ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿದೆ. ಜ.19ರಂದು ಈ ಬಗ್ಗೆ ಆದೇಶ ಮಾಡಿದ್ದು ಎರಡು ವಾರದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದೆ.
ಅವ್ಯವಹಾರದ ಬಗ್ಗೆ ದರ್ಗಾ ಕಮಿಟಿ ಸದಸ್ಯ ಯು.ಎಚ್ ಫಾರೂಕ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ವಕ್ಫ್ ಬೋರ್ಡ್ ಗೆ ತನಿಖೆ ನಡೆಸಲು ನಿರ್ದೇಶನ ನೀಡಿತ್ತು. ಅರ್ಜಿದಾರರು ಹಾಲಿ ಆಡಳಿತದ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ನೀಡಲು ಕೋರಿದ್ದರು. ಇದಕ್ಕೆ ಮಹಾಸಭೆ ಕರೆದು ಅವಕಾಶ ನೀಡುವಂತೆಯೂ ಡಿ.3ರಂದು ನೀಡಿದ ಆದೇಶದಲ್ಲಿ ತಿಳಿಸಿತ್ತು. ಕೋರ್ಟ್ ತನಿಖೆಗೆ ಆದೇಶ ಮಾಡಿದ್ದರೂ ವಕ್ಫ್ ಬೋರ್ಡ್ ಮಾತ್ರ ಪ್ರಭಾವಿಗಳ ಒತ್ತಡಕ್ಕೆ ಮಣಿದು ಮೌನವಾಗಿತ್ತು. ಇದರ ನಡುವೆ, ದರ್ಗಾ ಕಮಿಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತರಾತುರಿಯಲ್ಲಿ ಮಹಾಸಭೆ ಕರೆಯಲು ಮುಂದಾಗಿದ್ದರು. ಆದರೆ ಈ ರೀತಿ ಮಹಾಸಭೆ ಕರೆಯಲು ದರ್ಗಾ ಆಡಳಿತ ಸಮಿತಿಗೆ ಅಧಿಕಾರ ಇಲ್ಲ, ಈ ಬಗ್ಗೆ ವಕ್ಫ್ ಬೋರ್ಡ್ ತುರ್ತು ಕ್ರಮ ಕೈಗೊಳ್ಳಬೇಕೆಂದು ಕಮಿಟಿ ಸದಸ್ಯರು ಆಗ್ರಹ ಮಾಡಿದ್ದರು.
ಜ.18ರಂದು ಮಹಾಸಭೆ ಕರೆಯಲಾಗಿದ್ದರೂ ಕೋರಂ ಇಲ್ಲದ ಕಾರಣ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿತ್ತು. ಇದರ ಬೆನ್ನಲ್ಲೇ ರಾಜ್ಯ ವಕ್ಫ್ ಬೋರ್ಡ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಅವ್ಯವಹಾರ ವಿಚಾರದಲ್ಲಿ ತುರ್ತು ತನಿಖೆ ನಡೆಸಲು, ವಕ್ಫ್ ಬೋರ್ಡ್ ಕಾನೂನು ಅಧಿಕಾರಿಯೂ ಆಗಿರುವ ನಿವೃತ್ತ ನ್ಯಾಯಾಧೀಶರಾದ ಡಾ.ಶಶಿಕಲಾ ಉರಾನ್ಕರ್ ಅವರನ್ನು ನೇಮಕ ಮಾಡಿದ್ದಾರೆ. ಅಲ್ಲದೆ, ಎರಡು ವಾರದಲ್ಲಿ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ.
ದರ್ಗಾ ಕಮಿಟಿಯ ಭ್ರಷ್ಟಾಚಾರದ ಬಗ್ಗೆ ಹಾಲಿ ಸದಸ್ಯರೇ ಆರೋಪ ಮಾಡಿದ್ದರು. ಸರ್ಕಾರದಿಂದ ಬಂದಿದ್ದ 7 ಕೋಟಿ ಅನುದಾನ ಮತ್ತು ಉರೂಸ್ ಸಂದರ್ಭದಲ್ಲಿ ಬಂದಿದ್ದ ಆದಾಯ ಹಾಗೂ ದೇಣಿಗೆ ಸಂಗ್ರಹದ ಬಗ್ಗೆ ಆಡಳಿತ ಕಮಿಟಿ ಲೆಕ್ಕಪತ್ರ ನೀಡಿಲ್ಲ. ಸರ್ಕಾರದ ಅನುದಾನವನ್ನು ಬೇಕಾಬಿಟ್ಟಿ ಖರ್ಚು ಮಾಡಿದ್ದಾಗಿ ಕಮಿಟಿ ಸದಸ್ಯರು ಆರೋಪ ಮಾಡಿದ್ದರು.
Following allegations of financial irregularities and maladministration in the administration of the Syed Madani Dargah at Ullal, the Karnataka Wakf Board has appointed a retired judge to conduct an inquiry, acting on directions from the High Court.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am