ಬ್ರೇಕಿಂಗ್ ನ್ಯೂಸ್
20-01-26 08:07 pm Mangalore Correspondent ಕರಾವಳಿ
ಮಂಗಳೂರು, ಜ.20 : ಉಳ್ಳಾಲದ ಸೈಯದ್ ಮದನಿ ದರ್ಗಾ ಆಡಳಿತದ ಅವ್ಯವಹಾರ ಮತ್ತು ದುರಾಡಳಿತದ ಕುರಿತ ಆರೋಪದ ಬಗ್ಗೆ ಹೈಕೋರ್ಟ್ ಆದೇಶದಂತೆ, ಕರ್ನಾಟಕ ವಕ್ಫ್ ಬೋರ್ಡ್ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿದೆ. ಜ.19ರಂದು ಈ ಬಗ್ಗೆ ಆದೇಶ ಮಾಡಿದ್ದು ಎರಡು ವಾರದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದೆ.
ಅವ್ಯವಹಾರದ ಬಗ್ಗೆ ದರ್ಗಾ ಕಮಿಟಿ ಸದಸ್ಯ ಯು.ಎಚ್ ಫಾರೂಕ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ವಕ್ಫ್ ಬೋರ್ಡ್ ಗೆ ತನಿಖೆ ನಡೆಸಲು ನಿರ್ದೇಶನ ನೀಡಿತ್ತು. ಅರ್ಜಿದಾರರು ಹಾಲಿ ಆಡಳಿತದ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ನೀಡಲು ಕೋರಿದ್ದರು. ಇದಕ್ಕೆ ಮಹಾಸಭೆ ಕರೆದು ಅವಕಾಶ ನೀಡುವಂತೆಯೂ ಡಿ.3ರಂದು ನೀಡಿದ ಆದೇಶದಲ್ಲಿ ತಿಳಿಸಿತ್ತು. ಕೋರ್ಟ್ ತನಿಖೆಗೆ ಆದೇಶ ಮಾಡಿದ್ದರೂ ವಕ್ಫ್ ಬೋರ್ಡ್ ಮಾತ್ರ ಪ್ರಭಾವಿಗಳ ಒತ್ತಡಕ್ಕೆ ಮಣಿದು ಮೌನವಾಗಿತ್ತು. ಇದರ ನಡುವೆ, ದರ್ಗಾ ಕಮಿಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತರಾತುರಿಯಲ್ಲಿ ಮಹಾಸಭೆ ಕರೆಯಲು ಮುಂದಾಗಿದ್ದರು. ಆದರೆ ಈ ರೀತಿ ಮಹಾಸಭೆ ಕರೆಯಲು ದರ್ಗಾ ಆಡಳಿತ ಸಮಿತಿಗೆ ಅಧಿಕಾರ ಇಲ್ಲ, ಈ ಬಗ್ಗೆ ವಕ್ಫ್ ಬೋರ್ಡ್ ತುರ್ತು ಕ್ರಮ ಕೈಗೊಳ್ಳಬೇಕೆಂದು ಕಮಿಟಿ ಸದಸ್ಯರು ಆಗ್ರಹ ಮಾಡಿದ್ದರು.
ಜ.18ರಂದು ಮಹಾಸಭೆ ಕರೆಯಲಾಗಿದ್ದರೂ ಕೋರಂ ಇಲ್ಲದ ಕಾರಣ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿತ್ತು. ಇದರ ಬೆನ್ನಲ್ಲೇ ರಾಜ್ಯ ವಕ್ಫ್ ಬೋರ್ಡ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಅವ್ಯವಹಾರ ವಿಚಾರದಲ್ಲಿ ತುರ್ತು ತನಿಖೆ ನಡೆಸಲು, ವಕ್ಫ್ ಬೋರ್ಡ್ ಕಾನೂನು ಅಧಿಕಾರಿಯೂ ಆಗಿರುವ ನಿವೃತ್ತ ನ್ಯಾಯಾಧೀಶರಾದ ಡಾ.ಶಶಿಕಲಾ ಉರಾನ್ಕರ್ ಅವರನ್ನು ನೇಮಕ ಮಾಡಿದ್ದಾರೆ. ಅಲ್ಲದೆ, ಎರಡು ವಾರದಲ್ಲಿ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ.
ದರ್ಗಾ ಕಮಿಟಿಯ ಭ್ರಷ್ಟಾಚಾರದ ಬಗ್ಗೆ ಹಾಲಿ ಸದಸ್ಯರೇ ಆರೋಪ ಮಾಡಿದ್ದರು. ಸರ್ಕಾರದಿಂದ ಬಂದಿದ್ದ 7 ಕೋಟಿ ಅನುದಾನ ಮತ್ತು ಉರೂಸ್ ಸಂದರ್ಭದಲ್ಲಿ ಬಂದಿದ್ದ ಆದಾಯ ಹಾಗೂ ದೇಣಿಗೆ ಸಂಗ್ರಹದ ಬಗ್ಗೆ ಆಡಳಿತ ಕಮಿಟಿ ಲೆಕ್ಕಪತ್ರ ನೀಡಿಲ್ಲ. ಸರ್ಕಾರದ ಅನುದಾನವನ್ನು ಬೇಕಾಬಿಟ್ಟಿ ಖರ್ಚು ಮಾಡಿದ್ದಾಗಿ ಕಮಿಟಿ ಸದಸ್ಯರು ಆರೋಪ ಮಾಡಿದ್ದರು.
Following allegations of financial irregularities and maladministration in the administration of the Syed Madani Dargah at Ullal, the Karnataka Wakf Board has appointed a retired judge to conduct an inquiry, acting on directions from the High Court.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm