ಬ್ರೇಕಿಂಗ್ ನ್ಯೂಸ್
20-01-26 08:07 pm Mangalore Correspondent ಕರಾವಳಿ
ಮಂಗಳೂರು, ಜ.20 : ಉಳ್ಳಾಲದ ಸೈಯದ್ ಮದನಿ ದರ್ಗಾ ಆಡಳಿತದ ಅವ್ಯವಹಾರ ಮತ್ತು ದುರಾಡಳಿತದ ಕುರಿತ ಆರೋಪದ ಬಗ್ಗೆ ಹೈಕೋರ್ಟ್ ಆದೇಶದಂತೆ, ಕರ್ನಾಟಕ ವಕ್ಫ್ ಬೋರ್ಡ್ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿದೆ. ಜ.19ರಂದು ಈ ಬಗ್ಗೆ ಆದೇಶ ಮಾಡಿದ್ದು ಎರಡು ವಾರದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದೆ.
ಅವ್ಯವಹಾರದ ಬಗ್ಗೆ ದರ್ಗಾ ಕಮಿಟಿ ಸದಸ್ಯ ಯು.ಎಚ್ ಫಾರೂಕ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ವಕ್ಫ್ ಬೋರ್ಡ್ ಗೆ ತನಿಖೆ ನಡೆಸಲು ನಿರ್ದೇಶನ ನೀಡಿತ್ತು. ಅರ್ಜಿದಾರರು ಹಾಲಿ ಆಡಳಿತದ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ನೀಡಲು ಕೋರಿದ್ದರು. ಇದಕ್ಕೆ ಮಹಾಸಭೆ ಕರೆದು ಅವಕಾಶ ನೀಡುವಂತೆಯೂ ಡಿ.3ರಂದು ನೀಡಿದ ಆದೇಶದಲ್ಲಿ ತಿಳಿಸಿತ್ತು. ಕೋರ್ಟ್ ತನಿಖೆಗೆ ಆದೇಶ ಮಾಡಿದ್ದರೂ ವಕ್ಫ್ ಬೋರ್ಡ್ ಮಾತ್ರ ಪ್ರಭಾವಿಗಳ ಒತ್ತಡಕ್ಕೆ ಮಣಿದು ಮೌನವಾಗಿತ್ತು. ಇದರ ನಡುವೆ, ದರ್ಗಾ ಕಮಿಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತರಾತುರಿಯಲ್ಲಿ ಮಹಾಸಭೆ ಕರೆಯಲು ಮುಂದಾಗಿದ್ದರು. ಆದರೆ ಈ ರೀತಿ ಮಹಾಸಭೆ ಕರೆಯಲು ದರ್ಗಾ ಆಡಳಿತ ಸಮಿತಿಗೆ ಅಧಿಕಾರ ಇಲ್ಲ, ಈ ಬಗ್ಗೆ ವಕ್ಫ್ ಬೋರ್ಡ್ ತುರ್ತು ಕ್ರಮ ಕೈಗೊಳ್ಳಬೇಕೆಂದು ಕಮಿಟಿ ಸದಸ್ಯರು ಆಗ್ರಹ ಮಾಡಿದ್ದರು.
ಜ.18ರಂದು ಮಹಾಸಭೆ ಕರೆಯಲಾಗಿದ್ದರೂ ಕೋರಂ ಇಲ್ಲದ ಕಾರಣ ಸಭೆ ಕೊನೆ ಕ್ಷಣದಲ್ಲಿ ರದ್ದುಗೊಂಡಿತ್ತು. ಇದರ ಬೆನ್ನಲ್ಲೇ ರಾಜ್ಯ ವಕ್ಫ್ ಬೋರ್ಡ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಅವ್ಯವಹಾರ ವಿಚಾರದಲ್ಲಿ ತುರ್ತು ತನಿಖೆ ನಡೆಸಲು, ವಕ್ಫ್ ಬೋರ್ಡ್ ಕಾನೂನು ಅಧಿಕಾರಿಯೂ ಆಗಿರುವ ನಿವೃತ್ತ ನ್ಯಾಯಾಧೀಶರಾದ ಡಾ.ಶಶಿಕಲಾ ಉರಾನ್ಕರ್ ಅವರನ್ನು ನೇಮಕ ಮಾಡಿದ್ದಾರೆ. ಅಲ್ಲದೆ, ಎರಡು ವಾರದಲ್ಲಿ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ.
ದರ್ಗಾ ಕಮಿಟಿಯ ಭ್ರಷ್ಟಾಚಾರದ ಬಗ್ಗೆ ಹಾಲಿ ಸದಸ್ಯರೇ ಆರೋಪ ಮಾಡಿದ್ದರು. ಸರ್ಕಾರದಿಂದ ಬಂದಿದ್ದ 7 ಕೋಟಿ ಅನುದಾನ ಮತ್ತು ಉರೂಸ್ ಸಂದರ್ಭದಲ್ಲಿ ಬಂದಿದ್ದ ಆದಾಯ ಹಾಗೂ ದೇಣಿಗೆ ಸಂಗ್ರಹದ ಬಗ್ಗೆ ಆಡಳಿತ ಕಮಿಟಿ ಲೆಕ್ಕಪತ್ರ ನೀಡಿಲ್ಲ. ಸರ್ಕಾರದ ಅನುದಾನವನ್ನು ಬೇಕಾಬಿಟ್ಟಿ ಖರ್ಚು ಮಾಡಿದ್ದಾಗಿ ಕಮಿಟಿ ಸದಸ್ಯರು ಆರೋಪ ಮಾಡಿದ್ದರು.
Following allegations of financial irregularities and maladministration in the administration of the Syed Madani Dargah at Ullal, the Karnataka Wakf Board has appointed a retired judge to conduct an inquiry, acting on directions from the High Court.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm