ಬ್ರೇಕಿಂಗ್ ನ್ಯೂಸ್
20-01-26 10:59 pm Mangalore Correspondent ಕರಾವಳಿ
ಮಂಗಳೂರು, ಜ.20 : ನಗರದ ಹೊಯ್ಗೆ ಬಜಾರ್ ನಲ್ಲಿರುವ 158 ವರ್ಷಗಳ ಇತಿಹಾಸವುಳ್ಳ, ದೇಶದ ಮೊದಲ ಟೈಲ್ ಫ್ಯಾಕ್ಟರಿಯೆಂದು ಹೆಸರಾಗಿರುವ ಮಂಗಳೂರು ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ನಸುಕಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ನಸುಕಿನ 3-4 ಗಂಟೆ ವೇಳೆಗೆ ಹಠಾತ್ತಾಗಿ ಫ್ಯಾಕ್ಟರಿಯ ಒಂದು ಭಾಗಕ್ಕೆ ಬೆಂಕಿ ಹತ್ತಿಕೊಂಡಿದ್ದು ಬಹಳಷ್ಟು ನಷ್ಟ ಉಂಟಾಗಿದೆ.
ಆಬಳಿಕ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ಮಾಲಕರಾದ ಅಲ್ಬುಕರ್ಕ್ ಸನ್ಸ್ ಕುಟುಂಬದ ಸದಸ್ಯರಲ್ಲಿ ಕೇಳಿದಾಗ, ನಷ್ಟದ ಬಗ್ಗೆ ಮತ್ತು ಹೇಗೆ ಬೆಂಕಿ ಉಂಟಾಗಿದೆಯೆಂದು ಇನ್ನೂ ಗೊತ್ತಾಗಿಲ್ಲ ಎಂದಿದ್ದಾರೆ. ಮಂಗಳೂರು ಟೈಲ್ ಫ್ಯಾಕ್ಟರಿಯನ್ನು 1868ರಲ್ಲಿ ಬ್ರಿಟಿಷರ ಆಡಳಿತ ಇದ್ದಾಗ ಅಲೆಕ್ಸ್ ಅಲ್ಬುಕರ್ಕ್ ಪೈಯವರು ಆರಂಭಿಸಿದ್ದರು. ಸದ್ಯ ಈ ಕುಟುಂಬದ ನಾಲ್ಕನೇ ತಲೆಮಾರಿನವರು ಸಂಸ್ಥೆಯನ್ನು ನಡೆಸುತ್ತಿದ್ದಾರೆ.



ದೇಶ- ವಿದೇಶಕ್ಕೆ ಟೈಲ್ಸ್ ಮತ್ತು ಇನ್ನಿತರ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಪೂರೈಸುವುದರಲ್ಲಿ ಅಲ್ಬುಕರ್ಕ್ ಸನ್ಸ್ ಒಡೆತನದ ಈ ಫ್ಯಾಕ್ಟರಿ ಹೆಸರು ಪಡೆದಿದೆ. ಬೆಂಕಿ ಅವಘಡದಿಂದ ಫ್ಯಾಕ್ಟರಿಯ ಒಂದು ಭಾಗಕ್ಕೆ ಮಾತ್ರ ಹಾನಿಯಾಗಿದ್ದು ಉತ್ಪಾದನೆಗೇನೂ ತೊಂದರೆಯಾಗಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಈಗಲೂ ಮಂಗಳೂರು ಟೈಲ್ಸ್ ಸಂಸ್ಥೆಯ ಇಟ್ಟಿಗೆ, ಹಂಚುಗಳಿಗೆ ದೇಶಾದ್ಯಂತ ಬೇಡಿಕೆ ಇದೆ. ವಿಷಯ ತಿಳಿದು ಬೆಂಗಳೂರಿನಲ್ಲಿ ನೆಲೆಸಿದ್ದ ಅಲ್ಬುಕರ್ಕ್ ಸಂಸ್ಥೆಯವರು ಮಂಗಳೂರಿಗೆ ಬಂದಿದ್ದಾರೆ.
A fire broke out in the early hours of Tuesday at the historic Mangalore Tile Factory in Hoigebazar, known as India’s first tile factory with a 158-year legacy. The blaze reportedly started around 3–4 a.m., damaging a section of the factory and causing significant loss.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm