ಬ್ರೇಕಿಂಗ್ ನ್ಯೂಸ್
21-01-26 10:55 pm Mangalore Correspondent ಕರಾವಳಿ
ಪುತ್ತೂರು, ಜ.21 : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡಿದ್ದಾರೆಂದು ಮಾನವ ಬಂಧುತ್ವ ವೇದಿಕೆಯ ರಾಮಚಂದ್ರ ಕೆ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಜ.12ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುದ್ವೇಷದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ. ಸದ್ರಿ ಭಾಷಣವನ್ನು "VIKASANA TV" ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿರುತ್ತಾರೆ. ಸದ್ರಿ ಕಾರ್ಯಕ್ರಮದಲ್ಲಿ ಹಿಂದು - ಮುಸ್ಲಿಂ ಮಧ್ಯೆ ಕೋಮು ದ್ವೇಷ ಬಿತ್ತುವ ರೀತಿ ಮಾತನಾಡಿದ್ದಾರೆ.
ಅಲ್ಲದೆ, ಮುಸ್ಲಿಂ ಮತ್ತು ಕ್ರಿಸ್ತಿಯನ್ ಮತಾಂತರ, ದೇಶ ವಿಭಜನೆ ಬಗ್ಗೆ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ್ದಾರೆಂದು ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ದ, ಸದ್ರಿ ಭಾಷಣವನ್ನು ಪ್ರಸಾರ ಮಾಡಿದ "VIKASANA TV" (ವಿಕಸನ ಟಿವಿ)ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಪುತ್ತೂರು ಠಾಣೆಯಲ್ಲಿ ಕೋಮು ದ್ವೇಷದ ಭಾಷಣ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದರಲ್ಲಿ ಜಾಮೀನು ಸಿಗಲು ಎರಡು ತಿಂಗಳು ಬೇಕಾಗಿತ್ತು. ಕೊನೆಗೆ, ಜಾಮೀನು ನೀಡುವ ಸಂದರ್ಭದಲ್ಲಿ ಇಂತಹ ಭಾಷಣ ಮಾಡಬಾರದು, ಕೇಸು ದಾಖಲಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತ್ತು.
Another FIR has been registered against RSS leader Dr. Kalladka Prabhakar Bhat for allegedly delivering a hate speech during a Vivekananda Jayanti programme held at Vivekananda College, Puttur, on January 12.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am