ಬ್ರೇಕಿಂಗ್ ನ್ಯೂಸ್
22-01-26 02:55 pm Mangalore Correspondent ಕರಾವಳಿ
ಪುತ್ತೂರು, ಜ.22 : ಪತ್ನಿ ಜೊತೆಗಿನ ಕಲಹದಲ್ಲಿ ಬೇಸತ್ತು ವ್ಯಕ್ತಿಯೊಬ್ಬ ಪುತ್ತೂರಿನ ನ್ಯಾಯಾಲಯದಲ್ಲಿ ಜಡ್ಜ್ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ಜಗಳ ನಡೆದಿದ್ದು, ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಗಲಾಟೆ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪೊಲೀಸರು ಇಬ್ಬರಿಗೂ ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಮಹಿಳೆ ಮೇಲೆ ಕೈಮಾಡಿದರೆ ಕೇಸು ದಾಖಲಿಸುವುದಾಗಿ ಸಂಪ್ಯ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರ ಮಾತು ಕೇಳದೆ ವಿಚ್ಛೇದನದ ಮಾತುಗಳನ್ನಾಡಿದ್ದರು. ಇದರಂತೆ, ರವಿಗೆ ಇಂದು ಸಂಪ್ಯ ಠಾಣೆಗೆ ಬರುವಂತೆ ಪೊಲೀಸರು ತಿಳಿಸಿದ್ದರು.
ಈ ನಡುವೆ, ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದು ಜಡ್ಜ್ ಹಾಲ್ ನಲ್ಲಿಯೇ ವಿಷ ಸೇವನೆ ಮಾಡಿದ್ದಾನೆ. ವಿಷ ಸೇವನೆ ಬಳಿಕ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿದ್ದಾನೆ. ತಕ್ಷಣ ಅಲ್ಲಿನ ಸಿಬಂದಿ ವ್ಯಕ್ತಿಯನ್ನ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ರವಿ ಸೇವಿಸಿದ್ದಾರೆ ಎನ್ನಲಾಗಿದೆ. ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಒಯ್ಯಲಾಗಿದೆ.
A 35-year-old man allegedly attempted suicide by consuming poison inside the Puttur court premises, reportedly in front of a judge, following ongoing marital disputes with his wife. He was initially rushed to Puttur Government Hospital and later shifted to a hospital in Mangaluru as his condition turned critical.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm