ಬ್ರೇಕಿಂಗ್ ನ್ಯೂಸ್
22-01-26 02:55 pm Mangalore Correspondent ಕರಾವಳಿ
ಪುತ್ತೂರು, ಜ.22 : ಪತ್ನಿ ಜೊತೆಗಿನ ಕಲಹದಲ್ಲಿ ಬೇಸತ್ತು ವ್ಯಕ್ತಿಯೊಬ್ಬ ಪುತ್ತೂರಿನ ನ್ಯಾಯಾಲಯದಲ್ಲಿ ಜಡ್ಜ್ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ಜಗಳ ನಡೆದಿದ್ದು, ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಗಲಾಟೆ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪೊಲೀಸರು ಇಬ್ಬರಿಗೂ ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಮಹಿಳೆ ಮೇಲೆ ಕೈಮಾಡಿದರೆ ಕೇಸು ದಾಖಲಿಸುವುದಾಗಿ ಸಂಪ್ಯ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರ ಮಾತು ಕೇಳದೆ ವಿಚ್ಛೇದನದ ಮಾತುಗಳನ್ನಾಡಿದ್ದರು. ಇದರಂತೆ, ರವಿಗೆ ಇಂದು ಸಂಪ್ಯ ಠಾಣೆಗೆ ಬರುವಂತೆ ಪೊಲೀಸರು ತಿಳಿಸಿದ್ದರು.
ಈ ನಡುವೆ, ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದು ಜಡ್ಜ್ ಹಾಲ್ ನಲ್ಲಿಯೇ ವಿಷ ಸೇವನೆ ಮಾಡಿದ್ದಾನೆ. ವಿಷ ಸೇವನೆ ಬಳಿಕ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿದ್ದಾನೆ. ತಕ್ಷಣ ಅಲ್ಲಿನ ಸಿಬಂದಿ ವ್ಯಕ್ತಿಯನ್ನ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ರವಿ ಸೇವಿಸಿದ್ದಾರೆ ಎನ್ನಲಾಗಿದೆ. ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಒಯ್ಯಲಾಗಿದೆ.
A 35-year-old man allegedly attempted suicide by consuming poison inside the Puttur court premises, reportedly in front of a judge, following ongoing marital disputes with his wife. He was initially rushed to Puttur Government Hospital and later shifted to a hospital in Mangaluru as his condition turned critical.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am