ಬ್ರೇಕಿಂಗ್ ನ್ಯೂಸ್
22-01-26 02:55 pm Mangalore Correspondent ಕರಾವಳಿ
ಪುತ್ತೂರು, ಜ.22 : ಪತ್ನಿ ಜೊತೆಗಿನ ಕಲಹದಲ್ಲಿ ಬೇಸತ್ತು ವ್ಯಕ್ತಿಯೊಬ್ಬ ಪುತ್ತೂರಿನ ನ್ಯಾಯಾಲಯದಲ್ಲಿ ಜಡ್ಜ್ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ಜಗಳ ನಡೆದಿದ್ದು, ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಗಲಾಟೆ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪೊಲೀಸರು ಇಬ್ಬರಿಗೂ ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಮಹಿಳೆ ಮೇಲೆ ಕೈಮಾಡಿದರೆ ಕೇಸು ದಾಖಲಿಸುವುದಾಗಿ ಸಂಪ್ಯ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರ ಮಾತು ಕೇಳದೆ ವಿಚ್ಛೇದನದ ಮಾತುಗಳನ್ನಾಡಿದ್ದರು. ಇದರಂತೆ, ರವಿಗೆ ಇಂದು ಸಂಪ್ಯ ಠಾಣೆಗೆ ಬರುವಂತೆ ಪೊಲೀಸರು ತಿಳಿಸಿದ್ದರು.
ಈ ನಡುವೆ, ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದು ಜಡ್ಜ್ ಹಾಲ್ ನಲ್ಲಿಯೇ ವಿಷ ಸೇವನೆ ಮಾಡಿದ್ದಾನೆ. ವಿಷ ಸೇವನೆ ಬಳಿಕ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿದ್ದಾನೆ. ತಕ್ಷಣ ಅಲ್ಲಿನ ಸಿಬಂದಿ ವ್ಯಕ್ತಿಯನ್ನ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ರವಿ ಸೇವಿಸಿದ್ದಾರೆ ಎನ್ನಲಾಗಿದೆ. ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಒಯ್ಯಲಾಗಿದೆ.
A 35-year-old man allegedly attempted suicide by consuming poison inside the Puttur court premises, reportedly in front of a judge, following ongoing marital disputes with his wife. He was initially rushed to Puttur Government Hospital and later shifted to a hospital in Mangaluru as his condition turned critical.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm