ಬ್ರೇಕಿಂಗ್ ನ್ಯೂಸ್
23-01-26 11:44 am Mangalore Correspondent ಕರಾವಳಿ
ಮಂಗಳೂರು, ಜ 23 : ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ ಮಂಗಳೂರಿನ ಜನರನ್ನು, ವಿಶೇಷವಾಗಿ ತುಳು ಭಾಷಿಕರನ್ನು ಸೋಶಿಯಲ್ ಮೀಡಿಯಾದಲ್ಲಿ ನಕ್ಕು ನಗಿಸಿದ್ದ ಫೇಮಸ್ ರೀಲ್ಸ್ ಸ್ಟಾರ್ ಆಶಾ ಪಂಡಿತ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ವತಃ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಲಾಗಿದ್ದು, ನಿನ್ನೆ ರಾತ್ರಿ ಆಶಾ ಪಂಡಿತ್ ಅವರು ಹೃದಯಾಘಾತದಿಂದ ನಿಧನ ಹೊಂದಿದರು ಎಂದು ವರದಿಯಾಗಿದೆ. ನಿನ್ನೆ ತಡರಾತ್ರಿ ಆಶಾ ಪಂಡಿತ್ ಅವರಿಗೆ ವಾಂತಿ ಸಮಸ್ಯೆ ಉಂಟಾಗಿದ್ದು, ಮನೆಯ ಅಂಗಳದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಅದಾಗಲೇ ಹೃದಯಾಘಾತದಿಂದ ಕೊನೆಯುಸಿರೆಳಿದ್ದರು ಎಂದು ವೈದ್ಯರು ಘೋಷಿಸಿದರು.
ಆಶಾ ಪಂಡಿತ್ ಅವರ ನಿಧನದ ಸುದ್ದಿ ಅವರ ಅಭಿಮಾನಿಗಳಿಗೆ ಅಚ್ಚರಿಯನ್ನುಂಟು ಮಾಡಿದ್ದು, ಈ ಸುದ್ದಿ ನಿಜಕ್ಕೂ ನಂಬೋಕೆ ಸಾಧ್ಯವಿಲ್ಲ ಎಂದು ನೂರಾರು ಜನರು ಅವರ ಪೋಸ್ಟ್ನಲ್ಲಿ ಕಾಮೆಂಟ್ ಹಾಕುತ್ತಿದ್ದಾರೆ. ಪ್ರತಿನಿತ್ಯ ಬೈಗುಳದ ಪೋಸ್ಟ್ಗಳ ಮೂಲಕವೇ ಜನರನ್ನು ಮನರಂಜಿಸುತ್ತಿದ್ದ ಆಶಾ ಪಂಡಿತ್ ಅವರ ಪೋಸ್ಟ್ಗಳಿಗೆ ನಗುತ್ತಾ, ಬೈಯ್ಯುತ್ತಾ ಕಾಮೆಂಟ್ ಹಾಕುತ್ತಿದ್ದ ಜನರು ಇಂದು ಕಣ್ಣೀರಿನ ಕಾಮೆಂಟ್ಗಳನ್ನು ಹಾಕುತ್ತಿದ್ದಾರೆ.
ಕನ್ನಡ ಚಿತ್ರನಟಿ ಅಶ್ವಿತಿ ಶೆಟ್ಟಿ ಕೂಡ ಆಶಾ ಪಂಡಿತ್ ಅವರ ಪೋಸ್ಟ್ಗೆ ಕಾಮೆಂಟ್ ಹಾಕಿ ಕಂಬನಿ ಮಿಡಿದಿದ್ದಾರೆ, ಅಶ್ವಿತಿ ಶೆಟ್ಟಿ ಅವರು ತಮ್ಮ ಕಾಮೆಂಟ್ನಲ್ಲಿ ‘ನನಗೆ ಏನು ಹೇಳಬೇಕು ಅಂತಾನೇ ಗೊತ್ತಾಗ್ತಿಲ್ಲ, ನನಗೆ ಗೊತ್ತಿಲ್ಲದಂತೆ ನನ್ನ ಮುಖದಲ್ಲಿ ನೀವು ನಗು ತರಿಸಿದ್ದೀರಿ, ಈ ಸುದ್ದಿ ಕೇಳಿ ನನಗೆ ತುಂಬಾ ಬೇಸರವಾಯಿತು, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಪೋಸ್ಟ್ ಮಾಡಿದ್ದಾರೆ.
Popular Instagram reels creator Asha Pandit, fondly known as Mangaluru’s “Reels Queen,” passed away following a heart attack, leaving her followers in shock. Known for entertaining Tulu-language comedy videos, her sudden demise has triggered an outpouring of grief from fans and celebrities alike, with many expressing disbelief and sorrow on social media.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm