ಬ್ರೇಕಿಂಗ್ ನ್ಯೂಸ್
23-01-26 05:12 pm Udupi Staffer ಕರಾವಳಿ
ಕಾರ್ಕಳ, ಜ 23: ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ನಡೆದಿದೆ.
ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ತಪ್ಪು ದಿಕ್ಕಿನಲ್ಲಿ ನುಗ್ಗಿದೆ ಎನ್ನಲಾಗಿದೆ. ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ಗಾಡಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ದುರ್ಘಟನೆಯಲ್ಲಿ ತುಫಾನ್ನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಇತರ ಆರು ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ನಿವಾಸಿಗಳು ಮತ್ತು ಹಾದಿಹೋಕರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ವಾಹನದೊಳಗೆ ಸಿಲುಕಿದ್ದವರನ್ನು ಹರಸಾಹಸಪಟ್ಟು ಹೊರತೆಗೆದು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಮಿಯಾರು ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
A tragic road accident between a private express bus and a Tufan vehicle claimed three lives and left six others seriously injured near Miyaru Kambalacross in Karkala taluk on Friday afternoon. According to preliminary information, the private bus, which was traveling from Dharmasthala towards Karkala, was allegedly speeding and entered the wrong lane near Miyaru Kambalacross. At the same time, a Tufan vehicle heading from Karkala towards Belthangady was approaching, when the bus rammed into it head-on.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm