ಬ್ರೇಕಿಂಗ್ ನ್ಯೂಸ್
24-01-26 11:23 pm Mangaluru Staffer ಕರಾವಳಿ
ಮಂಗಳೂರು, ಜ.24: ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಗದೇ ಇದ್ದಲ್ಲಿ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಈಗಾಗಲೇ ಸುಮಾರು 15 ರೌಡಿಗಳನ್ನು ಬಂಧಿಸಿದ್ದು ವಿವಿಧ ಪ್ರಕರಣಗಳಲ್ಲಿ ವಿಚಾರಣೆ ಆರಂಭಿಸಲಾಗಿದೆ. ಪೊಲೀಸರ ಕೈಗೆ ಸಿಗದೇ ಇರುವ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಜಾಮೀನು ನೀಡಿದವರ ಕಂದಾಯ ದಾಖಲೆಗಳನ್ನು ನ್ಯಾಯಾಲಯದ ಆಸ್ತಿಯೆಂದು ಘೋಷಿಸಲಾಗುವುದು. ಈ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದು 17 ಜಾಮೀನುದಾರರ ಹೆಸರಿನಲ್ಲಿರುವ ಆರ್ ಟಿಸಿಯನ್ನು ನ್ಯಾಯಾಲಯದ ಆಸ್ತಿಯೆಂದು ನಮೂದಿಸಲಾಗಿದೆ. 11 ಮಂದಿಗೆ 10 ಸಾವಿರದಿಂದ 2 ಲಕ್ಷ ರೂ. ವರೆಗೆ ದಂಡ ವಿಧಿಸಲಾಗಿದೆ. ಓರ್ವ ಆರೋಪಿಯ ಮನೆಯನ್ನು ನ್ಯಾಯಾಲಯದ ಮೂಲಕ ಹರಾಜು ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೋಮು ದ್ವೇಷದ ಕೊಲೆ, ಹತ್ಯೆ, ದರೋಡೆ, ಸುಲಿಗೆ, ಅತ್ಯಾಚಾರ ಹೀಗೆ ಗಂಭೀರ ಪ್ರಕರಣಗಳಲ್ಲಿ ಪಾಲ್ಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ರೌಡಿ ಶೀಟರ್ಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ, ಅವರಿಗೆ ಜಾಮೀನು ನೀಡಿದವರಿಗೂ ಬಿಸಿ ಮುಟ್ಟಿಸಲಾಗಿದೆ. ಹೀಗಾಗಿ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡಲು ಬರುವವರು ಜಾಗ್ರತೆ ವಹಿಸಬೇಕಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಹೇಳಿದ್ದಾರೆ
Mangaluru Police Commissioner Sudheer Reddy has warned that stringent action will be taken against accused persons involved in serious crimes who evade arrest. He said that the properties of such accused will be seized and legal action will also be initiated against those who stood as sureties for them. Speaking to the media, the Police Commissioner said that around 15 rowdy-sheeters have already been arrested, and investigations are underway in various criminal cases. Steps have been initiated to attach the properties of accused persons who are absconding and failing to appear before the court.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am