ಬ್ರೇಕಿಂಗ್ ನ್ಯೂಸ್
26-01-26 05:05 pm HK News Desk ಕರಾವಳಿ
ಉಡುಪಿ, ಜ.26: ಪ್ರವಾಸಿಗರನ್ನು ವಿಹಾರಕ್ಕೆ ಕೊಂಡೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿದ್ದು ದೋಣಿಯಲ್ಲಿದ್ದ ಮೈಸೂರು ಮೂಲದ ಇಬ್ಬರು ಪ್ರವಾಸಿಗರು ಸಾವನಪ್ಪಿದ ಘಟನೆ ಕುಂದಾಪುರ ಕೋಡಿಬೆಂಗ್ರೆ ಬೀಚ್ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ.
ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತರು. ದಿಶಾ (26) ಎಂಬ ಮಹಿಳೆಯ ಸ್ಥಿತಿ ತೀರಾ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಧರ್ಮರಾಜ (26) ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸುತ್ತಿದ್ದಾರೆ. ಇವರು ಮೈಸೂರು ಜಿಲ್ಲೆಯ ಸರಸ್ವತೀಪುರಂ ಮೂಲದವರಾಗಿದ್ದು, ಅಲ್ಲಿನ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
14 ಮಂದಿಯ ತಂಡ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಇವರು ಕೋಡಿಬೆಂಗ್ರೆ ಡೆಲ್ಟಾ ಬೀಚ್ನಿಂದ ಪ್ರವಾಸಿ ದೋಣಿ ಮೂಲಕ ಸಮುದ್ರದಲ್ಲಿ ವಿಹಾರಕ್ಕೆ ಹೊರಟಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಂಗಾರಕಟ್ಟೆ ಶಿಪ್ ಬಿಲ್ಡಿಂಗ್ ಪ್ರದೇಶದ ಸಮೀಪ ನದಿ -ಸಮುದ್ರ ಸೇರುವ ಸ್ಥಳದಲ್ಲಿ ದೋಣಿ ಆಕಸ್ಮಿಕವಾಗಿ ಪಲ್ಟಿಯಾಯಿತು. ದೋಣಿಯಲ್ಲಿದ್ದ 14 ಮಂದಿ ಸಮುದ್ರದ ನೀರಿಗೆ ಬಿದ್ದಿದ್ದು ಇವರಲ್ಲಿ ಕೆಲವರು ಮಾತ್ರ ಲೈಫ್ ಜಾಕೆಟ್ ಧರಿಸಿದ್ದರೆನ್ನಲಾಗಿದೆ. ಕೂಡಲೇ ಇತರ ದೋಣಿಯವರು ನೀರಿಗೆ ಬಿದ್ದವರನ್ನು ರಕ್ಷಿಸಿ ತೀರಕ್ಕೆ ಕರೆದುಕೊಂಡು ಬಂದಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಇವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A tourist boat carrying visitors on a leisure trip capsized in the sea near Kodibengre Beach in Kundapura taluk on Sunday afternoon, resulting in the death of two tourists from Mysuru.The deceased have been identified as Shankarappa (22) and Sindhu (23), both natives of Mysuru. Another tourist, Disha (26), is in critical condition, while Dharmaraj (26) narrowly escaped death and is undergoing treatment. All of them were residents of Saraswathipuram in Mysuru district and were reportedly working at a call centre.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm