ಬ್ರೇಕಿಂಗ್ ನ್ಯೂಸ್
26-01-26 05:05 pm HK News Desk ಕರಾವಳಿ
ಉಡುಪಿ, ಜ.26: ಪ್ರವಾಸಿಗರನ್ನು ವಿಹಾರಕ್ಕೆ ಕೊಂಡೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿದ್ದು ದೋಣಿಯಲ್ಲಿದ್ದ ಮೈಸೂರು ಮೂಲದ ಇಬ್ಬರು ಪ್ರವಾಸಿಗರು ಸಾವನಪ್ಪಿದ ಘಟನೆ ಕುಂದಾಪುರ ಕೋಡಿಬೆಂಗ್ರೆ ಬೀಚ್ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ.
ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತರು. ದಿಶಾ (26) ಎಂಬ ಮಹಿಳೆಯ ಸ್ಥಿತಿ ತೀರಾ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಧರ್ಮರಾಜ (26) ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸುತ್ತಿದ್ದಾರೆ. ಇವರು ಮೈಸೂರು ಜಿಲ್ಲೆಯ ಸರಸ್ವತೀಪುರಂ ಮೂಲದವರಾಗಿದ್ದು, ಅಲ್ಲಿನ ಕಾಲ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
14 ಮಂದಿಯ ತಂಡ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಇವರು ಕೋಡಿಬೆಂಗ್ರೆ ಡೆಲ್ಟಾ ಬೀಚ್ನಿಂದ ಪ್ರವಾಸಿ ದೋಣಿ ಮೂಲಕ ಸಮುದ್ರದಲ್ಲಿ ವಿಹಾರಕ್ಕೆ ಹೊರಟಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಂಗಾರಕಟ್ಟೆ ಶಿಪ್ ಬಿಲ್ಡಿಂಗ್ ಪ್ರದೇಶದ ಸಮೀಪ ನದಿ -ಸಮುದ್ರ ಸೇರುವ ಸ್ಥಳದಲ್ಲಿ ದೋಣಿ ಆಕಸ್ಮಿಕವಾಗಿ ಪಲ್ಟಿಯಾಯಿತು. ದೋಣಿಯಲ್ಲಿದ್ದ 14 ಮಂದಿ ಸಮುದ್ರದ ನೀರಿಗೆ ಬಿದ್ದಿದ್ದು ಇವರಲ್ಲಿ ಕೆಲವರು ಮಾತ್ರ ಲೈಫ್ ಜಾಕೆಟ್ ಧರಿಸಿದ್ದರೆನ್ನಲಾಗಿದೆ. ಕೂಡಲೇ ಇತರ ದೋಣಿಯವರು ನೀರಿಗೆ ಬಿದ್ದವರನ್ನು ರಕ್ಷಿಸಿ ತೀರಕ್ಕೆ ಕರೆದುಕೊಂಡು ಬಂದಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಇವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A tourist boat carrying visitors on a leisure trip capsized in the sea near Kodibengre Beach in Kundapura taluk on Sunday afternoon, resulting in the death of two tourists from Mysuru.The deceased have been identified as Shankarappa (22) and Sindhu (23), both natives of Mysuru. Another tourist, Disha (26), is in critical condition, while Dharmaraj (26) narrowly escaped death and is undergoing treatment. All of them were residents of Saraswathipuram in Mysuru district and were reportedly working at a call centre.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am