ಬ್ರೇಕಿಂಗ್ ನ್ಯೂಸ್
29-01-26 10:38 pm Mangalore Correspondent ಕರಾವಳಿ
ಮಂಗಳೂರು, ಜ.29 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಧ್ವನಿ ಎತ್ತಿದರು.
ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು ಲೊಕೇಶನ್ ಸೆರೆಹಿಡಿದು ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತಿತ್ತು. ಈ ಸರ್ಕಾರ ಯಾವಾಗ ಹೊಸ ತಂತ್ರಾಂಶವನ್ನು ಜಾರಿಗೊಳಿಸಿತೋ ಅಂದಿನಿಂದ ಎಲ್ಲವೂ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಎರಡು ತಿಂಗಳಿನಲ್ಲಿ ಆಗಿರುವ ಇ-ಖಾತಾಗಳ ಸಂಖ್ಯೆ ನೋಡಿದರೆ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ ಸಚಿವರು ಮಾತ್ರ, ಸರ್ವರ್ ಉನ್ನತೀಕರಿಸಲಾಗಿದ್ದು ಯಾವುದೇ ಸಮಸ್ಯೆಯಿಲ್ಲವೆಂದು ಉತ್ತರಿಸಿರುವುದು ದುರಂತವೆಂದರು.
ಅಲ್ಲದೇ ನಗರದಲ್ಲಿ ಪಿಪಿಪಿ ಮಾಡಲ್ ನಲ್ಲಿ ಅಳವಡಿಸಲಾಗಿರುವ ಬೀದಿ ದೀಪಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ. ಹಳೆಯ ದೀಪಗಳು ದುರಸ್ತಿಯಾಗುತ್ತಿಲ್ಲ, ಹೊಸ ದೀಪಗಳು ಅಳವಡಿಸುತ್ತಿಲ್ಲ. ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಬಳಿ ಒಳಚರಂಡಿ ಕಾಮಗಾರಿ ಅಸ್ತವ್ಯಸ್ತಗೊಂಡಿರುವ ಬಗ್ಗೆ ಸ್ಥಳೀಯ ಮಹಿಳೆಯರು ದೂರು ನೀಡುತ್ತಿದ್ದಾರೆ. ಅದು ಸಚಿವರ ಸಹಿತ ಸ್ಪೀಕರ್ ಅವರ ಗಮನಕ್ಕೂ ಬಂದಿದೆ. ನಗರದ ಪ್ರಮುಖ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜಲಸಿರಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ. ಇಂತಹ ಮೊದಲಾದ ಸಮಸ್ಯೆಗಳ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಬೇಕು ಎಂದರು.
MLA Vedavyas Kamath highlighted serious e-Khata issues in Mangaluru City Corporation limits, along with damaged roads, faulty streetlights, drainage problems and delayed projects, urging the state government to take immediate corrective action.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am