ಬ್ರೇಕಿಂಗ್ ನ್ಯೂಸ್
01-02-26 07:52 pm Mangalore Correspondent ಕರಾವಳಿ
ಮಂಗಳೂರು, ಫೆ.1: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡೀಪಾರು ಮಾಡಿ ಆದೇಶಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಕ್ಕೆ ಹೈಕೋರ್ಟ್ ಮತ್ತೊಮ್ಮೆ ತಡೆಯಾಜ್ಞೆ ವಿಧಿಸಿದ್ದು, ವಿವೇಚನೆ ಬಳಸಿ ಮರು ಆದೇಶ ನೀಡುವಂತೆ ಮತ್ತೆ ಸೂಚಿಸಿದೆ.
ಈ ಹಿಂದೆಯೂ ಮಹೇಶ್ ಶೆಟ್ಟಿ ಗಡಿಪಾರಿಗೆ ಪುತ್ತೂರು ವಿಭಾಗಾಧಿಕಾರಿ ಆದೇಶ ನೀಡಿದ್ದರೂ ಹೈಕೋರ್ಟ್ ತಡೆ ಹಾಕಿ ಸರಿಯಾದ ಆದೇಶ ನೀಡಿ ಎಂದು ಎರಡು ತಿಂಗಳ ಹಿಂದೆ ಹೇಳಿತ್ತು. ಆನಂತರ, ಮತ್ತೊಮ್ಮೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ನೀಡಿದ್ದರು. ಆದರೆ ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ವಾದ ಆಲಿಸಿದ ಬಳಿಕ ಮತ್ತೆ ತಡೆ ಹಾಕಲಾಗಿದ್ದು ಎಸಿ ಸ್ಟೆಲ್ಲಾ ವರ್ಗೀಸ್ ಮುಖಭಂಗ ಅನುಭವಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂಬತ್ತು ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಿದ್ದ ಆದೇಶವನ್ನು ಶನಿವಾರ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದೆ. ಇದೇ ವೇಳೆ, ಗಡಿಪಾರು ವಿಚಾರದಲ್ಲಿ ವಿವೇಚನೆ ಬಳಸಿ ಮೂರು ವಾರಗಳಲ್ಲಿ ಹೊಸದಾಗಿ ಆದೇಶ ಮಾಡುವಂತೆ ಉಪ ವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ. ಉಪ ವಿಭಾಗಾಧಿಕಾರಿ ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.
ಉಪ ವಿಭಾಗಾಧಿಕಾರಿ ಮಹೇಶ್ ತಿಮರೋಡಿಗೆ ನೀಡಿರುವ ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಿರುವ ಬಹುತೇಕ ಪ್ರಕರಣಗಳಲ್ಲಿ ತಿಮರೋಡಿ ಖುಲಾಸೆಯಾಗಿದ್ದಾರೆ. ಈ ವಿಚಾರವನ್ನು ಆಕ್ಷೇಪಣೆಯ ಮೂಲಕ ಉಪ ವಿಭಾಗಾಧಿಕಾರಿ ಗಮನಕ್ಕೆ ತರಲಾಗಿದೆ. ಇದನ್ನು ಪರಿಗಣಿಸದೇ ಉಪ ವಿಭಾಗಾಧಿಕಾರಿ ಗಡಿಪಾರು ಆದೇಶ ಮಾಡಿದ್ದಾರೆ. ಇದನ್ನು ರಿಟ್ ಅರ್ಜಿಯ ಮೂಲಕ ಪ್ರಶ್ನಿಸಲಾಗಿದೆ. ವಿವೇಚನೆ ಬಳಸಿ, ಸೂಕ್ತ ಆದೇಶ ಹೊರಡಿಸುವಂತೆ ಈ ಹಿಂದೆ ಸಕ್ಷಮ ನ್ಯಾಯಾಲಯ ಆದೇಶಿಸಿತ್ತು. ಅದಕ್ಕೆ ಅನುಗುಣವಾಗಿ, ತಿಮರೋಡಿಯ ಆಕ್ಷೇಪಣೆಯನ್ನು ಪರಿಗಣಿಸಿ, ವಿವೇಚನೆ ಬಳಸಿ, ಸೂಕ್ತ ಆದೇಶವನ್ನು ಹೊಸದಾಗಿ ಮೂರು ವಾರಗಳಲ್ಲಿ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿ ನ್ಯಾಯಾಲಯವು ಅರ್ಜಿಯನ್ನು ಇತ್ಯರ್ಥಪಡಿಸಿದೆ.
The Karnataka High Court has once again stayed the externment order issued against activist Mahesh Shetty Timarodi by the Puttur Sub-Divisional Officer (SDO), directing the authority to reconsider the matter and pass a fresh order within three weeks.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am