ಬ್ರೇಕಿಂಗ್ ನ್ಯೂಸ್
01-02-26 07:52 pm Mangalore Correspondent ಕರಾವಳಿ
ಮಂಗಳೂರು, ಫೆ.1: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡೀಪಾರು ಮಾಡಿ ಆದೇಶಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಕ್ಕೆ ಹೈಕೋರ್ಟ್ ಮತ್ತೊಮ್ಮೆ ತಡೆಯಾಜ್ಞೆ ವಿಧಿಸಿದ್ದು, ವಿವೇಚನೆ ಬಳಸಿ ಮರು ಆದೇಶ ನೀಡುವಂತೆ ಮತ್ತೆ ಸೂಚಿಸಿದೆ.
ಈ ಹಿಂದೆಯೂ ಮಹೇಶ್ ಶೆಟ್ಟಿ ಗಡಿಪಾರಿಗೆ ಪುತ್ತೂರು ವಿಭಾಗಾಧಿಕಾರಿ ಆದೇಶ ನೀಡಿದ್ದರೂ ಹೈಕೋರ್ಟ್ ತಡೆ ಹಾಕಿ ಸರಿಯಾದ ಆದೇಶ ನೀಡಿ ಎಂದು ಎರಡು ತಿಂಗಳ ಹಿಂದೆ ಹೇಳಿತ್ತು. ಆನಂತರ, ಮತ್ತೊಮ್ಮೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ನೀಡಿದ್ದರು. ಆದರೆ ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ವಾದ ಆಲಿಸಿದ ಬಳಿಕ ಮತ್ತೆ ತಡೆ ಹಾಕಲಾಗಿದ್ದು ಎಸಿ ಸ್ಟೆಲ್ಲಾ ವರ್ಗೀಸ್ ಮುಖಭಂಗ ಅನುಭವಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂಬತ್ತು ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿಗೆ ಗಡಿಪಾರು ಮಾಡಿದ್ದ ಆದೇಶವನ್ನು ಶನಿವಾರ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದೆ. ಇದೇ ವೇಳೆ, ಗಡಿಪಾರು ವಿಚಾರದಲ್ಲಿ ವಿವೇಚನೆ ಬಳಸಿ ಮೂರು ವಾರಗಳಲ್ಲಿ ಹೊಸದಾಗಿ ಆದೇಶ ಮಾಡುವಂತೆ ಉಪ ವಿಭಾಗಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ. ಉಪ ವಿಭಾಗಾಧಿಕಾರಿ ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.
ಉಪ ವಿಭಾಗಾಧಿಕಾರಿ ಮಹೇಶ್ ತಿಮರೋಡಿಗೆ ನೀಡಿರುವ ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಿರುವ ಬಹುತೇಕ ಪ್ರಕರಣಗಳಲ್ಲಿ ತಿಮರೋಡಿ ಖುಲಾಸೆಯಾಗಿದ್ದಾರೆ. ಈ ವಿಚಾರವನ್ನು ಆಕ್ಷೇಪಣೆಯ ಮೂಲಕ ಉಪ ವಿಭಾಗಾಧಿಕಾರಿ ಗಮನಕ್ಕೆ ತರಲಾಗಿದೆ. ಇದನ್ನು ಪರಿಗಣಿಸದೇ ಉಪ ವಿಭಾಗಾಧಿಕಾರಿ ಗಡಿಪಾರು ಆದೇಶ ಮಾಡಿದ್ದಾರೆ. ಇದನ್ನು ರಿಟ್ ಅರ್ಜಿಯ ಮೂಲಕ ಪ್ರಶ್ನಿಸಲಾಗಿದೆ. ವಿವೇಚನೆ ಬಳಸಿ, ಸೂಕ್ತ ಆದೇಶ ಹೊರಡಿಸುವಂತೆ ಈ ಹಿಂದೆ ಸಕ್ಷಮ ನ್ಯಾಯಾಲಯ ಆದೇಶಿಸಿತ್ತು. ಅದಕ್ಕೆ ಅನುಗುಣವಾಗಿ, ತಿಮರೋಡಿಯ ಆಕ್ಷೇಪಣೆಯನ್ನು ಪರಿಗಣಿಸಿ, ವಿವೇಚನೆ ಬಳಸಿ, ಸೂಕ್ತ ಆದೇಶವನ್ನು ಹೊಸದಾಗಿ ಮೂರು ವಾರಗಳಲ್ಲಿ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿ ನ್ಯಾಯಾಲಯವು ಅರ್ಜಿಯನ್ನು ಇತ್ಯರ್ಥಪಡಿಸಿದೆ.
The Karnataka High Court has once again stayed the externment order issued against activist Mahesh Shetty Timarodi by the Puttur Sub-Divisional Officer (SDO), directing the authority to reconsider the matter and pass a fresh order within three weeks.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm