ಬ್ರೇಕಿಂಗ್ ನ್ಯೂಸ್
01-01-21 12:17 pm Mangalore Correspondent ಕರಾವಳಿ
ಮಂಗಳೂರು, ಜ.1: ಕೊರೊನಾ ಲಾಕ್ಡೌನ್ ಆಗಿ ಸುಮಾರು 10 ತಿಂಗಳ ಬಳಿಕ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳು ಕರಾವಳಿಯಲ್ಲಿ ಆರಂಭಗೊಂಡಿದೆ. 6ರಿಂದ 9ನೇ ತರಗತಿ ವರೆಗಿನ ಮಕ್ಕಳು ‘ವಿದ್ಯಾಗಮ-2’ ಕಾರ್ಯಕ್ರಮಕ್ಕಾಗಿ ಶಾಲೆಗಳಲ್ಲಿ ಹಾಜರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲೆ, ಕಾಲೇಜುಗಳಿಂದ ಹೊರಗೇ ಉಳಿದಿದ್ದ ವಿದ್ಯಾರ್ಥಿಗಳು 2021ರ ಹೊಸ ವರ್ಷದ ಮೊದಲ ದಿನದಿಂದ ಶಾಲೆ, ಕಾಲೇಜು ಆವರಣ ಪ್ರವೇಶಿಸಿದ್ದಾರೆ.
ಮಕ್ಕಳನ್ನು ಸ್ವಾಗತಿಸಲು ಕೆಲವು ದಿನಗಳ ಹಿಂದಿನಿಂದಲೇ ಶಾಲಾ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧತೆ ನಡೆಸಿದ್ದರು. ಕೆಲವು ಸರಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.
ತರಗತಿಗಳಿಗೆ ಹಾಗೂ ವಿದ್ಯಾಗಮಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಪಾಲಕರ ಅನುಮತಿ ಪತ್ರಗಳೊಂದಿಗೆ ಹಾಜರಾಗಬೇಕಿದೆ. ಅಲ್ಲದೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಪಡೆದೇ ಮಾತ್ರ ಶಾಲೆಗೆ ಆಗಮಿಸಿದ್ದಾರೆ.
ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಶಾಲಾ ಕೊಠಡಿಗಳು, ಶಾಲಾ ಆವರಣ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಪ್ರತಿದಿನ ಬೆಳಗ್ಗೆ 10ರಿಂದ 12.30ರ ವರೆಗೆ ನಡೆಯಲಿದೆ. 8 ಮತ್ತು 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರತಿದಿನ 10:ರಿಂದ ಮಧ್ಯಾಹ್ನ 1ರ ವರೆಗೆ ಇರುತ್ತದೆ.
The schools have reopened on Friday January 1 after having been closed for nine months because of corona fear. The schools have been spruced up to welcome the students back to schools.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm