ಬ್ರೇಕಿಂಗ್ ನ್ಯೂಸ್
01-01-21 12:17 pm Mangalore Correspondent ಕರಾವಳಿ
ಮಂಗಳೂರು, ಜ.1: ಕೊರೊನಾ ಲಾಕ್ಡೌನ್ ಆಗಿ ಸುಮಾರು 10 ತಿಂಗಳ ಬಳಿಕ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳು ಕರಾವಳಿಯಲ್ಲಿ ಆರಂಭಗೊಂಡಿದೆ. 6ರಿಂದ 9ನೇ ತರಗತಿ ವರೆಗಿನ ಮಕ್ಕಳು ‘ವಿದ್ಯಾಗಮ-2’ ಕಾರ್ಯಕ್ರಮಕ್ಕಾಗಿ ಶಾಲೆಗಳಲ್ಲಿ ಹಾಜರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲೆ, ಕಾಲೇಜುಗಳಿಂದ ಹೊರಗೇ ಉಳಿದಿದ್ದ ವಿದ್ಯಾರ್ಥಿಗಳು 2021ರ ಹೊಸ ವರ್ಷದ ಮೊದಲ ದಿನದಿಂದ ಶಾಲೆ, ಕಾಲೇಜು ಆವರಣ ಪ್ರವೇಶಿಸಿದ್ದಾರೆ.

ಮಕ್ಕಳನ್ನು ಸ್ವಾಗತಿಸಲು ಕೆಲವು ದಿನಗಳ ಹಿಂದಿನಿಂದಲೇ ಶಾಲಾ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧತೆ ನಡೆಸಿದ್ದರು. ಕೆಲವು ಸರಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.

ತರಗತಿಗಳಿಗೆ ಹಾಗೂ ವಿದ್ಯಾಗಮಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಪಾಲಕರ ಅನುಮತಿ ಪತ್ರಗಳೊಂದಿಗೆ ಹಾಜರಾಗಬೇಕಿದೆ. ಅಲ್ಲದೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಪಡೆದೇ ಮಾತ್ರ ಶಾಲೆಗೆ ಆಗಮಿಸಿದ್ದಾರೆ.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಶಾಲಾ ಕೊಠಡಿಗಳು, ಶಾಲಾ ಆವರಣ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಪ್ರತಿದಿನ ಬೆಳಗ್ಗೆ 10ರಿಂದ 12.30ರ ವರೆಗೆ ನಡೆಯಲಿದೆ. 8 ಮತ್ತು 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರತಿದಿನ 10:ರಿಂದ ಮಧ್ಯಾಹ್ನ 1ರ ವರೆಗೆ ಇರುತ್ತದೆ.
The schools have reopened on Friday January 1 after having been closed for nine months because of corona fear. The schools have been spruced up to welcome the students back to schools.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am