ಬ್ರೇಕಿಂಗ್ ನ್ಯೂಸ್
01-01-21 12:17 pm Mangalore Correspondent ಕರಾವಳಿ
ಮಂಗಳೂರು, ಜ.1: ಕೊರೊನಾ ಲಾಕ್ಡೌನ್ ಆಗಿ ಸುಮಾರು 10 ತಿಂಗಳ ಬಳಿಕ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳು ಕರಾವಳಿಯಲ್ಲಿ ಆರಂಭಗೊಂಡಿದೆ. 6ರಿಂದ 9ನೇ ತರಗತಿ ವರೆಗಿನ ಮಕ್ಕಳು ‘ವಿದ್ಯಾಗಮ-2’ ಕಾರ್ಯಕ್ರಮಕ್ಕಾಗಿ ಶಾಲೆಗಳಲ್ಲಿ ಹಾಜರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲೆ, ಕಾಲೇಜುಗಳಿಂದ ಹೊರಗೇ ಉಳಿದಿದ್ದ ವಿದ್ಯಾರ್ಥಿಗಳು 2021ರ ಹೊಸ ವರ್ಷದ ಮೊದಲ ದಿನದಿಂದ ಶಾಲೆ, ಕಾಲೇಜು ಆವರಣ ಪ್ರವೇಶಿಸಿದ್ದಾರೆ.

ಮಕ್ಕಳನ್ನು ಸ್ವಾಗತಿಸಲು ಕೆಲವು ದಿನಗಳ ಹಿಂದಿನಿಂದಲೇ ಶಾಲಾ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧತೆ ನಡೆಸಿದ್ದರು. ಕೆಲವು ಸರಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.

ತರಗತಿಗಳಿಗೆ ಹಾಗೂ ವಿದ್ಯಾಗಮಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಪಾಲಕರ ಅನುಮತಿ ಪತ್ರಗಳೊಂದಿಗೆ ಹಾಜರಾಗಬೇಕಿದೆ. ಅಲ್ಲದೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಪಡೆದೇ ಮಾತ್ರ ಶಾಲೆಗೆ ಆಗಮಿಸಿದ್ದಾರೆ.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಶಾಲಾ ಕೊಠಡಿಗಳು, ಶಾಲಾ ಆವರಣ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಪ್ರತಿದಿನ ಬೆಳಗ್ಗೆ 10ರಿಂದ 12.30ರ ವರೆಗೆ ನಡೆಯಲಿದೆ. 8 ಮತ್ತು 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರತಿದಿನ 10:ರಿಂದ ಮಧ್ಯಾಹ್ನ 1ರ ವರೆಗೆ ಇರುತ್ತದೆ.
The schools have reopened on Friday January 1 after having been closed for nine months because of corona fear. The schools have been spruced up to welcome the students back to schools.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm