ಬ್ರೇಕಿಂಗ್ ನ್ಯೂಸ್
06-02-26 01:55 pm Mangalore Correspondent ಕರಾವಳಿ
ಮಂಗಳೂರು, ಫೆ.6 : ನಿರ್ಲಕ್ಷ್ಯದಿಂದಲೇ ರಸ್ತೆ ಅಪಘಾತಗಳಾಗೋದು ಅನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಹೆಲ್ಮೆಟ್ ಹಾಕದೇ ತ್ರಿಬಲ್ ರೈಡ್ ನಲ್ಲಿದ್ದ ಮೂವರು ಯುವಕರು ಬೈಕ್ ನಲ್ಲಿ ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು ಈ ವೇಳೆ ಕಾರು ಡಿಕ್ಕಿಯಾಗಿ ಕೂದಲೆಳೆಯಲ್ಲಿ ಅಪಾಯದಿಂದ ಪಾರಾದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಬಳಿ ಘಟನೆಯಾಗಿದ್ದು ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುತ್ತಿದ್ದಾಗಲೇ ಬೈಕ್ ನಲ್ಲಿ ನೇರವಾಗಿ ರಸ್ತೆ ಡಿವೈಡರ್ ದಾಟುವ ಪ್ರಯತ್ನದಲ್ಲಿ ಅಪಘಾತವಾಗಿದೆ. ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ಮೂವರು ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ್ದಾರೆ.



ಪ್ರವೀಣ್ ಎಂಬಾತ ಬೈಕ್ ಸವಾರನಾಗಿದ್ದು ಹಿಂಬದಿಯಲ್ಲಿ ಇಬ್ಬರನ್ನು ಕೂರಿಸಿಕೊಂಡು ರಾಂಗ್ ಸೈಡ್ ನಲ್ಲಿ ಹೆದ್ದಾರಿಗೆ ಏಕಾಏಕಿ ಬೈಕ್ ನುಗ್ಗಿಸಿದ್ದಾನೆ. ಈ ವೇಳೆ, ವೇಗವಾಗಿ ಕಾರು ಬಂದು ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ಫುಟ್ಬಾಲ್ ನಂತೆ ಹಾರಿ ಬಿದ್ದಿದ್ದಾರೆ. ಸಿಸಿ ಟಿವಿಯಲ್ಲಿ ಭೀಕರ ಅಪಘಾತದ ದೃಶ್ಯ ಸೆರೆಯಾಗಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ಯುವಕ ಪಾರಾಗಿದ್ದು ಮುಂದಿದ್ದ ಇಬ್ಬರಿಗೂ ಪೆಟ್ಟು ಬಿದ್ದಿದೆ. ಬೈಕ್ ಚಾಲನೆ ಮಾಡುತ್ತಿದ್ದ ಪ್ರವೀಣ್ ಕೈಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನೊಬ್ಬನಿಗೂ ಕೈಗೆ, ತಲೆಗೆ ಪೆಟ್ಟು ಬಿದ್ದಿದೆ. ಅಪಘಾತಕ್ಕೆ ಬೈಕ್ ಸವಾರರ ನಿರ್ಲಕ್ಷ್ಯವೇ ಕಾರಣವಾಗಿದ್ದು ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಕಾರು ಚಾಲಕನಿಂದ ದೂರು ಪಡೆದು ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ಫೆ.5ರಂದು ಬೆಳಗ್ಗೆ 10.30ರ ಸುಮಾರಿಗೆ ನಡೆದಿದೆ.
Triple riding, no helmets, and a reckless highway entry led to a shocking crash near #Surathkal, #Mangaluru. A speeding car rammed into the bike, throwing the riders into the air, the entire incident was caught on CCTV. #accident #mangalorenews pic.twitter.com/tdvVXh5rPK
— Headline Karnataka (@hknewsonline) February 6, 2026
In a shocking incident near Surathkal on February 5 around 10:30 am, three youths riding triple without helmets were injured after suddenly entering the national highway and being hit by a speeding car. The entire incident was captured on CCTV.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm