ಬ್ರೇಕಿಂಗ್ ನ್ಯೂಸ್
06-02-26 01:55 pm Mangalore Correspondent ಕರಾವಳಿ
ಮಂಗಳೂರು, ಫೆ.6 : ನಿರ್ಲಕ್ಷ್ಯದಿಂದಲೇ ರಸ್ತೆ ಅಪಘಾತಗಳಾಗೋದು ಅನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಹೆಲ್ಮೆಟ್ ಹಾಕದೇ ತ್ರಿಬಲ್ ರೈಡ್ ನಲ್ಲಿದ್ದ ಮೂವರು ಯುವಕರು ಬೈಕ್ ನಲ್ಲಿ ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು ಈ ವೇಳೆ ಕಾರು ಡಿಕ್ಕಿಯಾಗಿ ಕೂದಲೆಳೆಯಲ್ಲಿ ಅಪಾಯದಿಂದ ಪಾರಾದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಬಳಿ ಘಟನೆಯಾಗಿದ್ದು ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುತ್ತಿದ್ದಾಗಲೇ ಬೈಕ್ ನಲ್ಲಿ ನೇರವಾಗಿ ರಸ್ತೆ ಡಿವೈಡರ್ ದಾಟುವ ಪ್ರಯತ್ನದಲ್ಲಿ ಅಪಘಾತವಾಗಿದೆ. ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ಮೂವರು ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ್ದಾರೆ.



ಪ್ರವೀಣ್ ಎಂಬಾತ ಬೈಕ್ ಸವಾರನಾಗಿದ್ದು ಹಿಂಬದಿಯಲ್ಲಿ ಇಬ್ಬರನ್ನು ಕೂರಿಸಿಕೊಂಡು ರಾಂಗ್ ಸೈಡ್ ನಲ್ಲಿ ಹೆದ್ದಾರಿಗೆ ಏಕಾಏಕಿ ಬೈಕ್ ನುಗ್ಗಿಸಿದ್ದಾನೆ. ಈ ವೇಳೆ, ವೇಗವಾಗಿ ಕಾರು ಬಂದು ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ಫುಟ್ಬಾಲ್ ನಂತೆ ಹಾರಿ ಬಿದ್ದಿದ್ದಾರೆ. ಸಿಸಿ ಟಿವಿಯಲ್ಲಿ ಭೀಕರ ಅಪಘಾತದ ದೃಶ್ಯ ಸೆರೆಯಾಗಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ಯುವಕ ಪಾರಾಗಿದ್ದು ಮುಂದಿದ್ದ ಇಬ್ಬರಿಗೂ ಪೆಟ್ಟು ಬಿದ್ದಿದೆ. ಬೈಕ್ ಚಾಲನೆ ಮಾಡುತ್ತಿದ್ದ ಪ್ರವೀಣ್ ಕೈಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನೊಬ್ಬನಿಗೂ ಕೈಗೆ, ತಲೆಗೆ ಪೆಟ್ಟು ಬಿದ್ದಿದೆ. ಅಪಘಾತಕ್ಕೆ ಬೈಕ್ ಸವಾರರ ನಿರ್ಲಕ್ಷ್ಯವೇ ಕಾರಣವಾಗಿದ್ದು ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಕಾರು ಚಾಲಕನಿಂದ ದೂರು ಪಡೆದು ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ಫೆ.5ರಂದು ಬೆಳಗ್ಗೆ 10.30ರ ಸುಮಾರಿಗೆ ನಡೆದಿದೆ.
Triple riding, no helmets, and a reckless highway entry led to a shocking crash near #Surathkal, #Mangaluru. A speeding car rammed into the bike, throwing the riders into the air, the entire incident was caught on CCTV. #accident #mangalorenews pic.twitter.com/tdvVXh5rPK
— Headline Karnataka (@hknewsonline) February 6, 2026
In a shocking incident near Surathkal on February 5 around 10:30 am, three youths riding triple without helmets were injured after suddenly entering the national highway and being hit by a speeding car. The entire incident was captured on CCTV.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am