ಬ್ರೇಕಿಂಗ್ ನ್ಯೂಸ್
06-02-26 03:09 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಮುಂದಿನ ಐದು ವರ್ಷ ನನ್ನ ತಂದೆಯವರೇ ಸಿಎಂ ಆಗಿರುತ್ತಾರೆ, ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯದ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತೂರಿನಲ್ಲಿ ಕಾಂಗ್ರೆಸ್ ಕಚೇರಿ ಶಿಲಾನ್ಯಾಸಕ್ಕೆ ಆಗಮಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಏರ್ಪೋರ್ಟ್ ನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
"ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಏನ್ ಮಾತು ಹೇಳ್ತಾರೋ ಅದನ್ನ ಗೌರವದಿಂದ ಸ್ವೀಕಾರ ಮಾಡೋಣ.. ಹೈಕಮಾಂಡ್ ಹೇಳಿದ ಮೇಲೆ ನಾವು ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ ಎಂದು ತೀಕ್ಷ್ಣ ರೀತಿಯಲ್ಲಿ ಟಾಂಗ್ ನೀಡಿದ್ದಾರೆ. ಬಸವರಾಜು ಸೇರಿದಂತೆ ಈ ಬಗ್ಗೆ ಕೆಲವರು ಆಡಿರುವ ಮಾತಿನ ಬಗ್ಗೆ ಕೇಳಿದಾಗ, ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆನೂ ಕೊಡಲ್ಲ ಎಂದರು.
ಮಾರ್ಚ್ ವೇಳೆಗೆ ರಾಜ್ಯದಲ್ಲಿ ನೂರು ಕಾಂಗ್ರೆಸ್ ಕಚೇರಿ ಮಾಡ್ತೀವಿ, ಮಾರ್ಚ್ 10 ರಂದು ಶಿಲಾನ್ಯಾಸ ಮಾಡ್ತೀನಿ ಎಂದು ಡಿಕೆಶಿ ಹೇಳಿದರು. ಪುತ್ತೂರಿನ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡರನ್ನು ಆಹ್ವಾನಿಸಿಲ್ಲ ಎಂಬ ಜಾಲತಾಣದ ಟೀಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ಮೇಲೆ ಕಾಂಗ್ರೆಸ್ ರಾಜಕಾರಣ ಮಾಡೋದು. ನಮಗೆ ಎಲ್ಲಾ ಜಾತಿ ಧರ್ಮ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಮೂಲ ಸಿದ್ಧಾಂತ.
ನಾವು ಫ್ರೀಯಾಗಿ ಜಾಗ ಕೊಡಿಸುತ್ತೇವೆ, ಬೇಕಾದವರು ಕಾಂಗ್ರೆಸ್ ಕಚೇರಿ ಕಟ್ಟಿಕೊಳ್ಳಲಿ. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ. ಪುತ್ತೂರಿನ ಕಾರ್ಯಕ್ರಮಕ್ಕೆ ಇನಾಯತ್ ಅಲಿ ಸೇರಿದಂತೆ ಎಲ್ಲರನ್ನೂ ಕರೆದಿದ್ದೇವೆ. ಎಲ್ಲರೂ ಸೇರಿಯೇ ಕಾರ್ಯಕ್ರಮ ಮಾಡ್ತಿದೇವೆ ಎಂದು ಹೇಳಿದ್ದಾರೆ.
Deputy Chief Minister D.K. Shivakumar reacted sarcastically to remarks made by Yathindra Siddaramaiah, who had reportedly stated that his father would continue as Chief Minister for the next five years with the “green signal” from the party high command.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am