ಬ್ರೇಕಿಂಗ್ ನ್ಯೂಸ್
06-02-26 03:09 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಮುಂದಿನ ಐದು ವರ್ಷ ನನ್ನ ತಂದೆಯವರೇ ಸಿಎಂ ಆಗಿರುತ್ತಾರೆ, ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯದ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತೂರಿನಲ್ಲಿ ಕಾಂಗ್ರೆಸ್ ಕಚೇರಿ ಶಿಲಾನ್ಯಾಸಕ್ಕೆ ಆಗಮಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಏರ್ಪೋರ್ಟ್ ನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.
"ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಏನ್ ಮಾತು ಹೇಳ್ತಾರೋ ಅದನ್ನ ಗೌರವದಿಂದ ಸ್ವೀಕಾರ ಮಾಡೋಣ.. ಹೈಕಮಾಂಡ್ ಹೇಳಿದ ಮೇಲೆ ನಾವು ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ ಎಂದು ತೀಕ್ಷ್ಣ ರೀತಿಯಲ್ಲಿ ಟಾಂಗ್ ನೀಡಿದ್ದಾರೆ. ಬಸವರಾಜು ಸೇರಿದಂತೆ ಈ ಬಗ್ಗೆ ಕೆಲವರು ಆಡಿರುವ ಮಾತಿನ ಬಗ್ಗೆ ಕೇಳಿದಾಗ, ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆನೂ ಕೊಡಲ್ಲ ಎಂದರು.
ಮಾರ್ಚ್ ವೇಳೆಗೆ ರಾಜ್ಯದಲ್ಲಿ ನೂರು ಕಾಂಗ್ರೆಸ್ ಕಚೇರಿ ಮಾಡ್ತೀವಿ, ಮಾರ್ಚ್ 10 ರಂದು ಶಿಲಾನ್ಯಾಸ ಮಾಡ್ತೀನಿ ಎಂದು ಡಿಕೆಶಿ ಹೇಳಿದರು. ಪುತ್ತೂರಿನ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡರನ್ನು ಆಹ್ವಾನಿಸಿಲ್ಲ ಎಂಬ ಜಾಲತಾಣದ ಟೀಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ಮೇಲೆ ಕಾಂಗ್ರೆಸ್ ರಾಜಕಾರಣ ಮಾಡೋದು. ನಮಗೆ ಎಲ್ಲಾ ಜಾತಿ ಧರ್ಮ ಬೇಕು. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಮೂಲ ಸಿದ್ಧಾಂತ.
ನಾವು ಫ್ರೀಯಾಗಿ ಜಾಗ ಕೊಡಿಸುತ್ತೇವೆ, ಬೇಕಾದವರು ಕಾಂಗ್ರೆಸ್ ಕಚೇರಿ ಕಟ್ಟಿಕೊಳ್ಳಲಿ. ಅಸೂಯೆ ಇರುವವರು ಈ ರೀತಿ ಮಾತನಾಡುತ್ತಾರೆ. ಪುತ್ತೂರಿನ ಕಾರ್ಯಕ್ರಮಕ್ಕೆ ಇನಾಯತ್ ಅಲಿ ಸೇರಿದಂತೆ ಎಲ್ಲರನ್ನೂ ಕರೆದಿದ್ದೇವೆ. ಎಲ್ಲರೂ ಸೇರಿಯೇ ಕಾರ್ಯಕ್ರಮ ಮಾಡ್ತಿದೇವೆ ಎಂದು ಹೇಳಿದ್ದಾರೆ.
Deputy Chief Minister D.K. Shivakumar reacted sarcastically to remarks made by Yathindra Siddaramaiah, who had reportedly stated that his father would continue as Chief Minister for the next five years with the “green signal” from the party high command.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm