ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.


ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm