ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.


ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am