ಬ್ರೇಕಿಂಗ್ ನ್ಯೂಸ್
08-02-26 10:10 pm HK News Desk ಕರಾವಳಿ
ಉಡುಪಿ, ಫೆ.8: ಕೇಂದ್ರ ಸರ್ಕಾರದ 'ಜಾಗತಿಕ ಸ್ಪರ್ಧಾತ್ಮಕ ಪ್ರವಾಸಿ ತಾಣಗಳ ಅಭಿವೃದ್ಧಿ ರಾಷ್ಟ್ರೀಯ ಅಭಿಯಾನ' ಅಡಿಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ 'ರಜತಾದ್ರಿ'ಯಲ್ಲಿ ನಡೆದ ಸಭೆಯಲ್ಲಿ ಅವರು ಈ ವಿಷಯ ಹಂಚಿಕೊಂಡರು.
ಕೋಡಿ-ಕನ್ಯಾನ, ಕೋಡಿ-ಕುಂದಾಪುರ, ಬಾರ್ಕೂರು ಬಂದರು ಪ್ರದೇಶ ಮತ್ತು ತ್ರಾಸಿ-ಮರವಂತೆ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮವಾಗಿ ಒಂದು ತಾಣವನ್ನು ಸಮಗ್ರ ಅಭಿವೃದ್ಧಿಗೆ ಆಯ್ಕೆ ಮಾಡಲಿದ್ದು ಆಯ್ಕೆಯಾದ ತಾಣದಲ್ಲಿ ನವೀಕರಿಸಬಹುದಾದ ಇಂಧನ ಬಳಕೆ, ಮೂಲಸೌಕರ್ಯ ವೃದ್ಧಿ, ಜಾಗತಿಕ ಮಟ್ಟದ ಪ್ರಚಾರ ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲಾಗುವುದು.
ಯೋಜನೆಯಡಿ ದೇಶಾದ್ಯಂತ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ₹300 ಕೋಟಿ ಅನುದಾನ ಮೀಸಲಿಟ್ಟಿದೆ. ಪರಿಸರ ಸಹ್ಯ ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಗುರಿ. ನೈಸರ್ಗಿಕ ಮತ್ತು ಸಾಂಸ್ಕೃತಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ, ಪರಿಸರ ಸ್ನೇಹಿ ರೀತಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಮೂಲಸೌಕರ್ಯ ಒದಗಿಸಲಾಗುವುದು. ಯೋಜನೆಯಲ್ಲಿ ಭೂಮಿಯನ್ನು ಸರ್ಕಾರ ನೀಡಲಿದ್ದು, ಖಾಸಗಿ ವಲಯದ ಸಹಭಾಗಿತ್ವಕ್ಕೂ ಅವಕಾಶ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಮಾತನಾಡಿ, "ಉಡುಪಿ ಜಿಲ್ಲೆಯು 98 ಕಿ.ಮೀ ಉದ್ದದ ಕರಾವಳಿ, ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯ, ಕೆರೆ-ನದಿಗಳನ್ನು ಹೊಂದಿದ್ದು, ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿವೆ ಎಂದರು. ಸಭೆಯಲ್ಲಿ ಐಪಿಇ ಗ್ಲೋಬಲ್ನ ಹೇಮಲತಾ ಅವರು ಯೋಜನೆಯ ತಾಂತ್ರಿಕ ವಿವರಗಳನ್ನು ಮಂಡಿಸಿದರು.
Four tourist destinations in Udupi district have been identified under the Central Government’s National Mission for Development of Globally Competitive Tourist Destinations, said Kota Srinivasa Poojary, Member of Parliament from Udupi–Chikkamagaluru.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm