ಬ್ರೇಕಿಂಗ್ ನ್ಯೂಸ್
08-02-26 11:17 pm HK News Desk ಕರಾವಳಿ
ಬೆಂಗಳೂರು, ಫೆ.8 : ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂಬ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸಲು ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸಿಬಿಐ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ಹೊರಡಿಸಿದ್ದ ತೀರ್ಪಿನ ಆದೇಶ ಜಾರಿಗೊಳಿಸಲು ಸಿಬಿಐಗೆ ನಿರ್ದೇಶಿಸುವಂತೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಎಂ.ಆರ್. ಬಾಲಕೃಷ್ಣ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಗೃಹ ಇಲಾಖೆ, ಪೊಲೀಸ್ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಪಶ್ಚಿಮ ವಿಭಾಗದ ಪೊಲೀಸ್ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ ದೆಹಲಿ ಮತ್ತು ಚೆನ್ನೈ ವಿಭಾಗದ ವಿಶೇಷ ತನಿಖಾ ದಳಕ್ಕೆ ನೋಟಿಸ್ ಜಾರಿಗೊಳಿಸಿ, ಫೆಬ್ರವರಿ 23ಕ್ಕೆ ವಿಚಾರಣೆ ಮುಂದೂಡಿದೆ.
2012ರಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಗಿಡಾದ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾ ಪ್ರಕರಣವನ್ನು 2013ರಲ್ಲಿ ಸಿಬಿಐ ತನಿಖೆಗೆ ವಹಿಸಿದ್ದು, 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ತನಿಖೆ ಬಳಿಕ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ. ಸಂತೋಷ್ ಅವರು ಪ್ರಕರಣದ ಆರೋಪಿಯೆಂದು ಗುರುತಿಸಿದ್ದ ಸಂತೋಷ ರಾವ್ ನನ್ನು ಅತ್ಯಾಚಾರ (ಐಪಿಸಿ ಸೆಕ್ಷನ್ 376) ಮತ್ತು ಕೊಲೆ (ಐಪಿಸಿ ಸೆಕ್ಷನ್ 302) ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಅಲ್ಲದೇ, 11 ವರ್ಷಗಳಿಂದ ಜೈಲಿನಲ್ಲಿದ್ದ ಸಂತೋಷ್ ರಾವ್ನನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸಿತ್ತು.
ಇದೇ ವೇಳೆ, ಕಳಪೆ ಮತ್ತು ದೋಷಪೂರಿತ ತನಿಖೆ ನಡೆಸಿರುವ ಮತ್ತು ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಈ ಪ್ರಕರಣವನ್ನು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ನಿರ್ದೇಶಿಸಿದ್ದರು. ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷಿ ಸಂಗ್ರಹಿಸಲು ವಿಫಲವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ನಡುವೆ, ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
The Karnataka High Court has issued notices to the Central Bureau of Investigation (CBI) and the Karnataka State Government on a petition seeking implementation of an order passed by the CBI Special Court in the Soujanya murder case, which had called for action against officials responsible for a defective investigation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am