ಬ್ರೇಕಿಂಗ್ ನ್ಯೂಸ್
09-02-26 02:50 pm Mangalore Correspondent ಕರಾವಳಿ
ಮಂಗಳೂರು, ಫೆ.9 : ನಗರದ ಕೆ.ಪಿ.ಟಿ ಜಂಕ್ಷನ್ ಬಳಿಯ ಎಸ್ ಕೆಎಸ್ ಅಪಾರ್ಟ್ಮೆಂಟ್ ಮುಂದಿನ ರಾಷ್ಟ್ರೀಯ ಹೆದ್ದಾರಿ 66ರ ಡಿವೈಡರ್ ಮುಚ್ಚುವ ಕಾರ್ಯಕ್ಕೆ ಅಡ್ಡಿಪಡಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಪಿ.ಟಿ ಮತ್ತು ಕುಂಟಿಕಾನ ನಡುವಿನ ಹೆದ್ದಾರಿ ತಿರುವಿನಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಡಿವೈಡರ್ ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿತ್ತು. ಇದರಂತೆ, ಫೆಬ್ರವರಿ 3ರಂದು ಮುಗ್ರೋಡಿ ಕನ್ಸ್ಟ್ರಕ್ಷನ್ ಕಂಪನಿ ಮೂಲಕ ಕಾಮಗಾರಿ ಆರಂಭಿಸಲಾಗಿತ್ತು.



ಮರುದಿನ ಫೆಬ್ರವರಿ 4ರಂದು ರಾತ್ರಿ 9:30ರ ಸುಮಾರಿಗೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ ಸ್ಥಳದಲ್ಲಿದ್ದು ಡಿವೈಡರ್ ಮುಚ್ಚುವ ಕಾಮಗಾರಿ ನಡೆಸಲು ಮಾರ್ಗದರ್ಶನ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಪ್ರಮೋದ್ ಬಲ್ಲಾಲ್ಬಾಗ್, ಉಮೇಶ್ ಶೆಟ್ಟಿ, ಪ್ರವೀಣ್ ಕುಮಾರ್, ಸಂತೋಷ್ ಕುಮಾರ್ ಬಾರೆಬೈಲು ಮತ್ತು ಇತರರು ಅಕ್ರಮ ಕೂಟ ರಚಿಸಿಕೊಂಡು ಸ್ಥಳದಲ್ಲಿ ಸೇರಿದ್ದು ಕೆಲಸ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಂದಿಸಿದ್ದಾರೆ. ಈ ಬಗ್ಗೆ ಯೋಜನಾ ನಿರ್ದೇಶಕರ ದೂರಿನಂತೆ ಕದ್ರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66, 73, 169 ಮತ್ತು 75ರ ದುರಸ್ತಿ ಹಾಗೂ ಮಾರ್ಪಾಡು ಮಾಡುವ ಬಗ್ಗೆ ನಿರ್ಧರಿಸಲು ಕಾನೂನುಬದ್ಧ ಅಧಿಕಾರ ಎನ್ಎಚ್ಎಐ ಪ್ರಾಧಿಕಾರಕ್ಕಿದೆ. ಸದ್ಯಕ್ಕೆ ತಲಪಾಡಿಯಿಂದ ಮುಲ್ಕಿ ವರೆಗಿನ ಎನ್ಎಚ್ 66ರಲ್ಲಿ ಅಲ್ಲಲ್ಲಿ ಹಾಕಿರುವ 64 ಡಿವೈಡರ್ ಮುಚ್ಚಲು ಸ್ಥಳ ಗುರುತಿಸಲಾಗಿದೆ. ಹೆದ್ದಾರಿಗೆ ಪೂರ್ತಿ ಡಾಮರು ಆಗಿರುವುದರಿಂದ ವಾಹನಗಳು ಅತಿ ವೇಗದಲ್ಲಿ ಸಂಚರಿಸುತ್ತಿದ್ದು ಅಲ್ಲಲ್ಲಿ ಡಿವೈಡರ್ ಹಾಕುವುದು ಅಪಘಾತಕ್ಕೆ ಕಾರಣವಾಗುತ್ತದೆ ಎಂಬ ನೆಲೆಯಲ್ಲಿ ಪೊಲೀಸ್ ಇಲಾಖೆ ಶಿಫಾರಸು ಅಧರಿಸಿ ಹೆದ್ದಾರಿ ಪ್ರಾಧಿಕಾರ ಡಿವೈಡರ್ ವಿರುದ್ಧ ನಿರ್ಧಾರ ಕೈಗೊಂಡಿದೆ.
A case has been registered at Mangaluru East (Kadri) Police Station against five individuals for allegedly obstructing government officials and halting work related to the closure of a highway divider near KPT Junction on NH-66. The National Highways Authority of India (NHAI) had initiated the closure following repeated accidents at the stretch between KPT and Kuntikana.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am