ಬ್ರೇಕಿಂಗ್ ನ್ಯೂಸ್
09-02-26 02:50 pm Mangalore Correspondent ಕರಾವಳಿ
ಮಂಗಳೂರು, ಫೆ.9 : ನಗರದ ಕೆ.ಪಿ.ಟಿ ಜಂಕ್ಷನ್ ಬಳಿಯ ಎಸ್ ಕೆಎಸ್ ಅಪಾರ್ಟ್ಮೆಂಟ್ ಮುಂದಿನ ರಾಷ್ಟ್ರೀಯ ಹೆದ್ದಾರಿ 66ರ ಡಿವೈಡರ್ ಮುಚ್ಚುವ ಕಾರ್ಯಕ್ಕೆ ಅಡ್ಡಿಪಡಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಪಿ.ಟಿ ಮತ್ತು ಕುಂಟಿಕಾನ ನಡುವಿನ ಹೆದ್ದಾರಿ ತಿರುವಿನಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಡಿವೈಡರ್ ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿತ್ತು. ಇದರಂತೆ, ಫೆಬ್ರವರಿ 3ರಂದು ಮುಗ್ರೋಡಿ ಕನ್ಸ್ಟ್ರಕ್ಷನ್ ಕಂಪನಿ ಮೂಲಕ ಕಾಮಗಾರಿ ಆರಂಭಿಸಲಾಗಿತ್ತು.



ಮರುದಿನ ಫೆಬ್ರವರಿ 4ರಂದು ರಾತ್ರಿ 9:30ರ ಸುಮಾರಿಗೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ ಸ್ಥಳದಲ್ಲಿದ್ದು ಡಿವೈಡರ್ ಮುಚ್ಚುವ ಕಾಮಗಾರಿ ನಡೆಸಲು ಮಾರ್ಗದರ್ಶನ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಪ್ರಮೋದ್ ಬಲ್ಲಾಲ್ಬಾಗ್, ಉಮೇಶ್ ಶೆಟ್ಟಿ, ಪ್ರವೀಣ್ ಕುಮಾರ್, ಸಂತೋಷ್ ಕುಮಾರ್ ಬಾರೆಬೈಲು ಮತ್ತು ಇತರರು ಅಕ್ರಮ ಕೂಟ ರಚಿಸಿಕೊಂಡು ಸ್ಥಳದಲ್ಲಿ ಸೇರಿದ್ದು ಕೆಲಸ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಂದಿಸಿದ್ದಾರೆ. ಈ ಬಗ್ಗೆ ಯೋಜನಾ ನಿರ್ದೇಶಕರ ದೂರಿನಂತೆ ಕದ್ರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66, 73, 169 ಮತ್ತು 75ರ ದುರಸ್ತಿ ಹಾಗೂ ಮಾರ್ಪಾಡು ಮಾಡುವ ಬಗ್ಗೆ ನಿರ್ಧರಿಸಲು ಕಾನೂನುಬದ್ಧ ಅಧಿಕಾರ ಎನ್ಎಚ್ಎಐ ಪ್ರಾಧಿಕಾರಕ್ಕಿದೆ. ಸದ್ಯಕ್ಕೆ ತಲಪಾಡಿಯಿಂದ ಮುಲ್ಕಿ ವರೆಗಿನ ಎನ್ಎಚ್ 66ರಲ್ಲಿ ಅಲ್ಲಲ್ಲಿ ಹಾಕಿರುವ 64 ಡಿವೈಡರ್ ಮುಚ್ಚಲು ಸ್ಥಳ ಗುರುತಿಸಲಾಗಿದೆ. ಹೆದ್ದಾರಿಗೆ ಪೂರ್ತಿ ಡಾಮರು ಆಗಿರುವುದರಿಂದ ವಾಹನಗಳು ಅತಿ ವೇಗದಲ್ಲಿ ಸಂಚರಿಸುತ್ತಿದ್ದು ಅಲ್ಲಲ್ಲಿ ಡಿವೈಡರ್ ಹಾಕುವುದು ಅಪಘಾತಕ್ಕೆ ಕಾರಣವಾಗುತ್ತದೆ ಎಂಬ ನೆಲೆಯಲ್ಲಿ ಪೊಲೀಸ್ ಇಲಾಖೆ ಶಿಫಾರಸು ಅಧರಿಸಿ ಹೆದ್ದಾರಿ ಪ್ರಾಧಿಕಾರ ಡಿವೈಡರ್ ವಿರುದ್ಧ ನಿರ್ಧಾರ ಕೈಗೊಂಡಿದೆ.
A case has been registered at Mangaluru East (Kadri) Police Station against five individuals for allegedly obstructing government officials and halting work related to the closure of a highway divider near KPT Junction on NH-66. The National Highways Authority of India (NHAI) had initiated the closure following repeated accidents at the stretch between KPT and Kuntikana.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm