ಬ್ರೇಕಿಂಗ್ ನ್ಯೂಸ್
11-02-26 03:45 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಮಂಗಳೂರು - ಮೂಡುಬಿದ್ರೆ ಹೆದ್ದಾರಿಯ ಎಡಪದವು ಸಮೀಪದ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಹಾಲಿ ಇರುವ ಹಳೆ ರಸ್ತೆ ಘನ ವಾಹನಗಳ ಓಡಾಟದಿಂದ ಬಿರುಕು ಬಿಟ್ಟಿದೆ. ಅಪಾಯ ಕಂಡುಬಂದಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆಬ್ರವರಿ 12 ರಿಂದ ಮಾರ್ಚ್ 13-ರ ವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಸಲಿದ್ದು ಸದ್ರಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಸೂಚಿಸಲಾಗಿದೆ.





ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಟಿಯಿಂದ ಮಂಗಳೂರು - ಮೂಡಬಿದ್ರೆ ನಡುವೆ ಸಂಚರಿಸುವ ವಾಹನಗಳು ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಲು ಸೂಚಿಸಲಾಗಿದೆ.
ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.
ಅಧಿಕಾರಿಗಳ ಅಸಡ್ಡೆಗೆ ಜನರಿಗೆ ಹೊರೆ !
ಎಡಪದವು ಬಳಿಯ ಏರು ರಸ್ತೆ ಇರುವಲ್ಲಿ ಹೊಸ ಹೆದ್ದಾರಿ ಮಾಡುವುದಕ್ಕಾಗಿ ಪ್ರಪಾತ ರೀತಿ ಅಗೆಯಲಾಗಿದೆ. ಕಳೆದ ಬೇಸಗೆಯಲ್ಲಿ ಅಲ್ಲಿ ಕೆಂಪು ಕಲ್ಲು ತೆಗೆದು ಮಾರಾಟ ಮಾಡಲಾಗಿತ್ತು. ಮೇಲ್ಭಾಗದಲ್ಲಿ ರಸ್ತೆ ಇದ್ದರೂ ಅದರ ಅಂಚಿನ ವರೆಗೂ ಅಗೆದಿದ್ದರಿಂದ ಈಗ ಕುಸಿತವಾಗಿದೆ. ಹೆದ್ದಾರಿ ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಕುಸಿಯುತ್ತಿರುವ ಕಾರಣ ಹಳೆ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು- ಮೂಡುಬಿದ್ರೆ ಸಂಪರ್ಕಕ್ಕೆ ಪ್ರಯಾಣಿಕ ವಾಹನಗಳು ಸುತ್ತು ಬಳಸಿ ಹೋಗುವಂತಾಗಿದೆ. ಇಲ್ಲಿ ರಸ್ತೆ ಕುಸಿಯಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕಿದೆ.
Due to excavation work for a new highway near Machoor Cross at Edapadavu, the existing Mangaluru–Moodbidri road has developed cracks and become unsafe for heavy vehicles. The National Highways Authority has announced a 30-day closure from February 12 to March 13, with traffic diverted through alternate routes.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am