ಬ್ರೇಕಿಂಗ್ ನ್ಯೂಸ್
16-02-26 11:02 pm HK Desk ಕರಾವಳಿ
ಕೊಪ್ಪಳ, ಫೆ.16: ಹಂಪಿ ಹತ್ತಿರ ನಡೆದ ಘೋರ ಹತ್ಯೆ-ಅತ್ಯಾಚಾರ ಪ್ರಕರಣದಲ್ಲಿ ಗಂಗಾವತಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಇಸ್ರೇಲ್ ಹಾಗೂ ಭಾರತ ಮೂಲದ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಅಮೆರಿಕ ಮೂಲದ ಪ್ರವಾಸಿಗನ ಹತ್ಯೆ ಸಂಬಂಧಿಸಿದ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಗಂಗಾವತಿ ನ್ಯಾಯಾಲಯವು ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ತೀರ್ಪು ಪ್ರಕಟಿಸಿ, ಇಂತಹ ಕ್ರೂರ ಅಪರಾಧಗಳಿಗೆ ಸಮಾಜದಲ್ಲಿ ಯಾವುದೇ ಸ್ಥಳವಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಐವರು ಪ್ರವಾಸಿಗರು ಆನೆಗೊಂದಿಯ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಮಾ.6 ರಂದು ರಾತ್ರಿ ಊಟ ಮುಗಿಸಿ ಸುತ್ತಾಡಲು ಹೊರಗೆ ತೆರಳಿದ್ದರು. ಸಣಾಪೂರ ಕೆರೆಯ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಯ ಬಳಿ ಹೋಗಿ ಸಂಗೀತ ಆಲಿಸುತ್ತಾ ಕುಳಿತಾಗ ಮೂವರು ದುಷ್ಕರ್ಮಿಗಳು ಹಣ ಕಳ್ಳತನ ಮಾಡುವ ಉದ್ದೇಶದಿಂದ ಬಂದು ಗಲಾಟೆ ನಡೆಸಿದ್ದರು.
ಮದ್ಯದ ಅಮಲಿನಲ್ಲಿದ್ದ ದುಷ್ಕರ್ಮಿಗಳು ಮೂವರು ಪುರುಷರ ಮೇಲೆ ಹಲ್ಲೆ ನಡೆಸಿ ಕೆರೆಗೆ ತಳ್ಳಿದ್ದರು. ಜೊತೆಗೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆರೆಗೆ ಬಿದ್ದ ಮೂವರ ಪೈಕಿ ಇಬ್ಬರು ದಡಕ್ಕೆ ಸೇರಿದ್ದು, ಇನ್ನೋರ್ವನ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ದಡಕ್ಕೆ ಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಮೃತದೇಹ 24 ಗಂಟೆಗಳ ನಂತರ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.
ಕೊಲೆಯಾದ ಪ್ರವಾಸಿಯನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿತ್ತು. ಜರ್ಮನ್ ದೇಶದ ಡೇನೈಲ್ ಹಾಗೂ ಮಹಾರಾಷ್ಟ್ರ ಮೂಲದ ಪಂಕಜ್ ಗಾಯಗೊಂಡಿದ್ದರು. ಅತ್ಯಾಚಾರಕ್ಕೀಡಾದವರು ಓರ್ವ ಇಸ್ರೇಲ್ ಮಹಿಳೆ ಹಾಗೂ ಒಬ್ಬಳು ಭಾರತದ ಮಹಿಳೆ ಎಂದು ತಿಳಿದುಬಂದಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಹಂಪಿ ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರುವಂತಾಗಿತ್ತು.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಂತರ ನ್ಯಾಯಾಲಯವು ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am