ಬ್ರೇಕಿಂಗ್ ನ್ಯೂಸ್
19-02-26 05:38 pm Mangalore ಕರಾವಳಿ
ಉಳ್ಳಾಲ, ಫೆ.19 ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ.
ಐದು ವರುಷಗಳ ಹಿಂದೆ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಹಲವರು ಆತ್ಮಹತ್ಯೆಗೈದಿದ್ದ ಘಟನೆ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಕಾಫೀ ಡೇ ಸಂಸ್ಥಾಪಕ ಸಿದ್ಧಾರ್ಥ ಇದೇ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆಗೈದ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನೇತ್ರಾವತಿ ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಮುಂದಾಗುವುದನ್ನು ತಡೆಯಲು ಮಂಗಳೂರು ನಗರಾಭಿವೃದ್ಧಿ ಇಲಾಖೆಯ 63 ಲಕ್ಷ ರೂಪಾಯಿ ಅನುದಾನದಿಂದ ನೇತ್ರಾವತಿ ಸೇತುವೆಯುದ್ದಕ್ಕೂ ಫೆನ್ಸಿಂಗ್ ಮತ್ತು ಸಿಸಿಟಿವಿಯನ್ನು ಅಳವಡಿಸಲಾಗಿತ್ತು.



ಇದರಿಂದಾಗಿ ಕಳೆದ ಐದು ವರುಷಗಳಲ್ಲಿ ಇಲ್ಲಿ ಆತ್ಮಹತ್ಯೆ ಸರಣಿ ಕಡಿಮೆಯಾಗಿತ್ತು. ಇಬ್ಬರು ಮಾತ್ರ ಸೇತುವೆ ಆವರಣ ಗೋಡೆಗೆ ಅಳವಡಿಸಿದ ಪೈಪ್ ಲೈನ್ ಮೂಲಕ ಪ್ರಯಾಸದಿಂದ ಹಾದು ಹೋಗಿ ನದಿಗೆ ಜಿಗಿದು ಆತ್ಮಹತ್ಯೆಗೈದಿದ್ದರು. ಅದು ಬಿಟ್ಟರೆ ಫೆನ್ಸಿಂಗ್ ಅಳವಡಿಕೆ ಯೋಜನೆ ಬಹುತೇಕ ಫಲಶ್ರುತಿ ಕಂಡಿತ್ತು. ಫೆನ್ಸಿಂಗ್ ಮತ್ತು ಸಿಸಿಟಿವಿ ಅಳವಡಿಸಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಅದರ ನಿರ್ವಹಣೆಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿತ್ತು.
ಇದೀಗ ಟೆಂಪೋ ಢಿಕ್ಕಿಯ ಪರಿಣಾಮ ಸೇತುವೆಯ ಫೆನ್ಸಿಂಗ್ ಅರೆಬರೆ ಕಿತ್ತುಹೋಗಿದ್ದು ಇದರ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮತ್ತೆ ಆತ್ಮಹತ್ಯೆಗೆ ಸೇತುವೆ ತೆರೆದುಕೊಂಡಿದೆಯೇ ಎನ್ನುವ ಮಾತುಗಳು ಜಾಲತಾಣದಲ್ಲಿ ಬರತೊಡಗಿವೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಹರಿದಿರುವ ಫೆನ್ಸಿಂಗ್ ಬೇಲಿಯನ್ನು ದುರಸ್ತಿ ಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Mini Tempo Crashes Into Netravati Bridge Wall, rs 60 Lakh Safety Fence Severely Damaged
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am