ಬ್ರೇಕಿಂಗ್ ನ್ಯೂಸ್
20-02-26 04:18 pm Mangalore Correspondent ಕರಾವಳಿ
ಉಳ್ಳಾಲ, ಫೆ.20: ಸರಕಾರಿ ಭೂಮಿಯ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪಟ್ಟಣ ವ್ಯಾಪ್ತಿಯ ಬಡ ವಸತಿ ರಹಿತರಿಗೆ ನಿವೇಶನ ಹಂಚುವಂತೆ ಬಿಜೆಪಿ ಅಧಿಕಾರದ ಆಡಳಿತವನ್ನೇ ನಿರಂತರವಾಗಿ ಪ್ರಶ್ನಿಸಿ ಕೊನೆಗೆ ಅದೇ ವಿಚಾರದಲ್ಲಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಧರಣಿಯನ್ನೂ ನಡೆಸಿದ್ದ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯ ಸುಜಿತ್ ಮಾಡೂರು ಅವರನ್ನ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಫೆ.19ರಂದು ಈ ಆದೇಶ ಮಾಡಿದ್ದು ಸುಜಿತ್ ಮಾಡೂರು ಅವರು ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿರುವುದಾಗಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಆದೇಶದ ಪ್ರತಿಯನ್ನು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಅವರಿಗೆ ಕಳುಹಿಸಲಾಗಿದ್ದು ಆ ಪ್ರತಿಯು ನಿನ್ನೆಯೇ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂದು ಮಧ್ಯಾಹ್ನ ಸುಜಿತ್ ಮಾಡೂರು ಕೈ ಸೇರಿದೆ.



ಕಳೆದ ಆಗಸ್ಟ್ ತಿಂಗಳಲ್ಲಿ ಕೋಟೆಕಾರು ಪ.ಪಂ ನಲ್ಲಿ ಸತತ ಎರಡನೇ ಬಾರಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಪ್ರತೀ ತಿಂಗಳ ಸಾಮಾನ್ಯ ಸಭೆಯಲ್ಲಿ ಆಡಳಿತ ಬಿಜೆಪಿ ಪಕ್ಷದ ಕೌನ್ಸಿಲರ್ ಸುಜಿತ್ ಮಾಡೂರು ಅವರು ಕಳೆದ 15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬಡ ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಮಾಡದಿರುವ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಧ್ವನಿ ಎತ್ತುತ್ತಲೇ ಬಂದಿದ್ದರು.
ಕಳೆದ ಜನವರಿ 29 ರಂದು ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಸುಜಿತ್ ಮಾಡೂರು ಅವರು ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಮಾಡದಿರುವ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತ ಪಡಿಸಿದ್ದಲ್ಲದೆ, ವಿಪಕ್ಷದವರ ಜತೆ ಸಾಮಾನ್ಯ ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಹಾಗೂ ಗ್ರಾಮ ಕರಣಿಕರಿಗೆ ಧಿಕ್ಕಾರ ಕೂಗಿದ್ದರು.
ಕೋಟೆಕಾರು ಪಟ್ಟಣ ವ್ಯಾಪ್ತಿಯಲ್ಲಿ ಸಾಕಷ್ಟು ಸರಕಾರಿ ಭೂಮಿಯಿದ್ದರೂ ಅಧಿಕಾರಿಗಳು ವಸತಿ ರಹಿತ ಬಡವರಿಗೆ ನಿವೇಶನ ಹಂಚುವ ಕಾರ್ಯ ನಡೆಸಿಲ್ಲ. ಆದರೆ ನಡುಕುಮೇರು ಎಂಬಲ್ಲಿ ಪಟ್ಟಣ ಪಂಚಾಯತ್ಗೆ ಸೇರಿರುವ ಸರಕಾರಿ ಜಾಗದಲ್ಲಿ ಭೂ ಮಾಫಿಯಗಳು ಕಟ್ಟಿರುವ ನಿವೇಶನಗಳನ್ನ ನೆಲಸಮ ಮಾಡುವಂತೆ ಪ.ಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡರೂ ಸಹ ಯಾವುದೇ ತಾರ್ಕಿಕ ಕ್ರಮ ಕೈಗೊಳ್ಳದ ಪಂಚಾಯತ್ ಆಡಳಿತ ವಿರುದ್ಧ ಸುಜಿತ್ ಅವರು ಸಾಮಾನ್ಯ ಸಭೆಗಳಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅಕ್ರಮ ಕಟ್ಟಡಗಳನ್ನ ತೆರವುಗೊಳಿಸುವ ವಿಚಾರದಲ್ಲಿ ಕುಂಟು ನೆಪ ಹೇಳಿ ಜವಬ್ದಾರಿಯಿಂದ ನುಣುಚಿಕೊಳ್ಳುವ ಅಧಿಕಾರಿಗಳನ್ನೂ ಸಹ ಸುಜಿತ್ ಅವರು ನಿರಂತರವಾಗಿ ಜಾಡಿಸುತ್ತಿದ್ದರು.
ಬಡವರಿಗೆ ನಿವೇಶನ ನೀಡಲು ಹೋರಾಟ ನಡೆಸುತ್ತಿರುವ ಕೌನ್ಸಿಲರನ್ನು ಪಕ್ಷದಿಂದ ಉಚ್ಚಾಟನೆ ನಡೆಸಿರುವ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm