ಬ್ರೇಕಿಂಗ್ ನ್ಯೂಸ್
21-02-26 09:02 pm Mangaluru Staffer ಕರಾವಳಿ
ಉಳ್ಳಾಲ, ಫೆ.21: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡಾ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗಳೊಬ್ಬಳು ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.


ಈ ವೇಳೆ ತನುಷ್ಕಾ ಲೂಡೊ ಆಟದಲ್ಲಿ ಬಳಸಲಾಗುವ ಹೊಸ ಶಂಕು ಆಕಾರದ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕಾಯ್ನ್ ಲಭಿಸಿದೆ. ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಹೈಸ್ಕೂಲ್ ನಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ದಿಢೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm