ಬ್ರೇಕಿಂಗ್ ನ್ಯೂಸ್
21-02-26 09:02 pm Mangaluru Staffer ಕರಾವಳಿ
ಉಳ್ಳಾಲ, ಫೆ.21: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡಾ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗಳೊಬ್ಬಳು ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.


ಈ ವೇಳೆ ತನುಷ್ಕಾ ಲೂಡೊ ಆಟದಲ್ಲಿ ಬಳಸಲಾಗುವ ಹೊಸ ಶಂಕು ಆಕಾರದ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕಾಯ್ನ್ ಲಭಿಸಿದೆ. ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಹೈಸ್ಕೂಲ್ ನಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ದಿಢೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm