ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am