ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm