ಬ್ರೇಕಿಂಗ್ ನ್ಯೂಸ್
01-03-26 04:07 pm HK News Desk ಕರಾವಳಿ
ಉಡುಪಿ, ಮಾ.1: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣಾ ಪಿಎಸ್ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ.
‘ನಮ್ಮ ಪೊಲೀಸ್, ನಮ್ಮ ಹೆಮ್ಮೆ. ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿ’ಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.
ಉಡುಪಿ ನಗರ ಪಂಚಾಯತ್ ಮುಂಭಾಗದಲ್ಲಿ ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನವರಾದ ನಾಸಿರ್ ಹುಸೇನ್, ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಠಾಣೆ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಂಡ್ಲೂರಿನಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. 58 ವರ್ಷದ ನಾಸಿರ್ ಹುಸೇನ್ 2010ರಲ್ಲಿ ಪಿಎಸ್ಐ ಆಗಿ ಇಲಾಖೆ ಸೇರಿದ್ದು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm