ಬ್ರೇಕಿಂಗ್ ನ್ಯೂಸ್
03-03-26 10:37 am HK News Staffer ಕರಾವಳಿ
ಉಳ್ಳಾಲ, ಮಾ.3: ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾನು ಪ್ರೀತಿಸುತ್ತಿದ್ದ ಹುಡುಗಿ ನಾಲ್ಕು ವರ್ಷಗಳ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಸೋಮೇಶ್ವರದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಬಂದಿದ್ದ ಪುನೀತ್ ಮತ್ತೆ ಒಮನ್ಗೆ ಮರಳಿದ್ದರು.

ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾ ನಿವಾಸಿ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಬಹಳ ಅನ್ಯೋನ್ಯವಾಗಿದ್ದ ಜೋಡಿಯು ಹಲವೆಡೆ ಸುತ್ತಾಡಿರುವ ಫೋಟೊಗಳನ್ನ ಜಾಲತಾಣಗಳಲ್ಲಿ ಹಾಕಿದ್ದರು.
ಇತ್ತೀಚಿನ ದಿನಗಳಲ್ಲಿ ಯುವತಿ ಪುನೀತ್ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೂ ಪ್ರತಿಕ್ರಿಯೆ ನೀಡದೇ ಪ್ರೀತಿಯನ್ನ ನಿರಾಕರಿಸುತ್ತಿದ್ದಳೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರೇಯಸಿಯೊಂದಿಗೆ ವಿರಸ ತಾಳಲಾರದೆ ಪುನೀತ್ ಮನನೊಂದಿದ್ದು, ಈ ವಿಚಾರವನ್ನು ತನ್ನ ಆಪ್ತ ಗೆಳೆಯರಲ್ಲೂ ಪ್ರಸ್ತಾಪಿಸಿದ್ದರು.

ಪ್ರೇಮ ವೈಫಲ್ಯದ ಸಂಕಟದಲ್ಲಿ ನರಳುತ್ತಿದ್ದ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತ ಪರಿಸ್ಥಿತಿಯ (ಇರಾನ್ ಸಂಘರ್ಷ) ಹಿನ್ನೆಲೆ ಒಮನ್ ದೇಶದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚುವರಿ ಸಮಯ ಬೇಕಾಗುವ ಸಾಧ್ಯತೆ ಇದ್ದು, ಮೃತದೇಹವನ್ನ ಭಾರತಕ್ಕೆ ತರಲು ವಿಳಂಬವಾಗಬಹುದೆಂದು ಕುಟುಂಬದ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಮೃತ ಪುನೀತ್ ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm