ಬ್ರೇಕಿಂಗ್ ನ್ಯೂಸ್
03-03-26 02:39 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 3: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ಮತ್ತು ಸುದೀರ್ಘ ಕಾಲದಿಂದ ನ್ಯಾಯ ನಿಷ್ಠೆಯಿಂದ ರಾಜಕೀಯ ಜೀವನದಲ್ಲಿದ್ದ ನಗರದ ರಥಬೀದಿ ನಿವಾಸಿ ಸತೀಶ್ ಪ್ರಭು(59) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ರಥಬೀದಿಯ ತಮ್ಮ ಮನೆಯಲ್ಲಿದ್ದಾಗ ಕುಸಿದು ಬಿದ್ದ ಅವರನ್ನು ಕೂಡಲೇ ಯೆನಪೋಯ ಆಸ್ಪತ್ರೆಗೆ ಒಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಬ್ರೇನ್ ಹೇಮರೇಜ್ ಆಗಿರುವುದಾಗಿ ಹೇಳಿದ್ದು ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಏಕೈಕ ಪುತ್ರನನ್ನು ಅಗಲಿದ್ದಾರೆ.
ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದ ಸತೀಶ್ ಪ್ರಭು ಅವರು ಬಾಲ್ಯದಿಂದಲೇ ಸಂಘದ ಸ್ವಯಂಸೇವಕರು. ಸಂಘನಿಕೇತನದ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಮುಂಚೂಣಿಯಲ್ಲಿದ್ದು ಸೇವಾ ಚಟುವಟಿಕೆ ನಡೆಸುತ್ತಿದ್ದರು. ಕುದ್ರೋಳಿಯಲ್ಲಿ ವಿವೇಕಾನಂದ ಪ್ರಿಂಟರ್ಸ್ ಎನ್ನುವ ಸಣ್ಣ ಮುದ್ರಣ ಸಂಸ್ಥೆಯನ್ನು ಹೊಂದಿದ್ದ ಸತೀಶ್ ಪ್ರಭು, ಅದರಲ್ಲೇ ಜೀವನ ತೃಪ್ತಿ ಕಂಡವರು. ಆರೆಸ್ಸೆಸ್, ಬಿಜೆಪಿಯಲ್ಲಿ ದೊಡ್ಡವರ ಸಂಪರ್ಕ ಇದ್ದರೂ, ಅದನ್ನು ಮುಂದಿಟ್ಟು ರಾಜಕೀಯ ಮಾಡಿದವರಲ್ಲ. ಕಳೆದ ಬಾರಿ ಬಿಜೆಪಿ ಒಳಗಡೆ ಅಸಮಧಾನಗೊಂಡು ಕೆಲವು ಸಮಯ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರಿದ್ದರು. ಆದರೆ ಅಲ್ಲಿ ಒಗ್ಗಿಕೊಳ್ಳಲು ಸಾಧ್ಯವಾಗದೆ ಮತ್ತೆ ಮಾತೃಪಕ್ಷಕ್ಕೆ ಸೇರಿ ಸಕ್ರಿಯವಾಗಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm